ಬೆಂಗಳೂರು: ರಾಜಕಾರಣದಲ್ಲಿ ಟೀಕೆ ಸಹಜ. ಅರಮನೆಯಲ್ಲಿದ್ದರೂ ಅದು ಇದ್ದೇ ಇರುತ್ತದೆ. ರಾಜಕೀಯದಲ್ಲಿ ಸ್ವಲ್ಪ ಹೆಚ್ಚಾಗಿರುತ್ತದೆ ಎಂದು ಮೈಸೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿ ಯಡಿಯೂರಪ್ಪ ಭೇಟಿ ಮಾಡಿದ ನಂತರ ಮಾತನಾಡಿದ ಅವರು, ಚುನಾವಣೆಯಲ್ಲಿ ಮೈಸೂರು ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುವ ಜವಾಬ್ದಾರಿ ಸಿಗುವಂತಾಗಿದೆ. 9 ವರ್ಷ ಮೈಸೂರಿನ ಅರಮನೆ ಜವಾಬ್ದಾರಿ ಹೊತ್ತಿದ್ದೇನೆ. ಎಲ್ಲ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗಿದ್ದೇನೆ. ವೈಯಕ್ತಿಕವಾಗಿ ಕೂಡ ಅಭಿವೃದ್ಧಿ ಮಾಡಬಹುದು. ಆದರೆ ಉತ್ತಮ ಸರ್ಕಾರ ಇದ್ದರೆ ಮತ್ತಷ್ಟು ಅಭಿವೃದ್ಧಿಗೆ ಅನುಕೂಲ ಎಂದು ಹೇಳಿದ್ದಾರೆ.
ಅರಮನೆಯಲ್ಲಿದ್ದರೆ ಮಾತು ಕೇಳೋದಿಲ್ಲ ಅಂತಲ್ಲ. ಸಾರ್ವಜನಿಕ ಜೀವನದಲ್ಲಿ ಎಲ್ಲವನ್ನೂ ಎದುರಿಸಬೇಕು. ಜನರು ಅವಕಾಶ ಕೊಟ್ಟರೆ ಮೈಸೂರು-ಕೊಡಗು ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದ್ದಾರೆ.