ಮಂಡ್ಯ : ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದ ರೈತರು ಮತ್ತು ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಮೊಸಳೆಕೊಪ್ಪಲು ಗ್ರಾಮದಲ್ಲಿ ರಾತ್ರಿ ಸುರಿದ ಬಾರಿ ಬಿರುಗಾಳಿ ಮಳೆಗೆ ಮರಗಳು ನೆಲಕ್ಕುರುಳಿವೆ. ತೆಂಗು ಅಡಿಕೆ ಬಾಳೆ ಲಕ್ಷಾಂತರ ರೂಪಾಯಿಗಳ ಬೆಳೆ ನಾಶವಾಗಿದೆ. ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬಗಳು ಬಿದ್ದಿವೆ. ಹಾಗಾಗಿ ಗ್ರಾಮದ ರಸ್ತೆ ಸಂಪರ್ಕ ಬಂದ್ ಆಗಿದೆ. ಬೃಹತ್ ಗಾತ್ರದ ಮರಗಳು ಮನೆಯ ಮೇಲೆ ಬಿದ್ದಿರುವ ಕಾರಣಕ್ಕೆ ಕುಟುಂಬಸ್ಥರು ನರಳುವಂತೆ ಆಗಿದೆ. ಎರಡು ದಿನಗಳಲ್ಲಿ ಕೈ ಸೇರಬೇಕಿದ್ದ ರೇಷ್ಮೆ ಬೆಳೆ ಸರ್ವನಾಶಬಾಗಿ ರೈತರು ಕಂಗಾಲು ಆಗಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಸರಿಪಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...








