ಮಂಡ್ಯ : ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದ ರೈತರು ಮತ್ತು ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಮೊಸಳೆಕೊಪ್ಪಲು ಗ್ರಾಮದಲ್ಲಿ ರಾತ್ರಿ ಸುರಿದ ಬಾರಿ ಬಿರುಗಾಳಿ ಮಳೆಗೆ ಮರಗಳು ನೆಲಕ್ಕುರುಳಿವೆ. ತೆಂಗು ಅಡಿಕೆ ಬಾಳೆ ಲಕ್ಷಾಂತರ ರೂಪಾಯಿಗಳ ಬೆಳೆ ನಾಶವಾಗಿದೆ. ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬಗಳು ಬಿದ್ದಿವೆ. ಹಾಗಾಗಿ ಗ್ರಾಮದ ರಸ್ತೆ ಸಂಪರ್ಕ ಬಂದ್ ಆಗಿದೆ. ಬೃಹತ್ ಗಾತ್ರದ ಮರಗಳು ಮನೆಯ ಮೇಲೆ ಬಿದ್ದಿರುವ ಕಾರಣಕ್ಕೆ ಕುಟುಂಬಸ್ಥರು ನರಳುವಂತೆ ಆಗಿದೆ. ಎರಡು ದಿನಗಳಲ್ಲಿ ಕೈ ಸೇರಬೇಕಿದ್ದ ರೇಷ್ಮೆ ಬೆಳೆ ಸರ್ವನಾಶಬಾಗಿ ರೈತರು ಕಂಗಾಲು ಆಗಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಸರಿಪಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸ್ಯಾಂಡಲ್ವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಕ್ಯಾರವನ್ ಮಾಲೀಕರಾದ ಬಾದ್ಷಾ ಕಿಚ್ಚ ಸುದೀಪ್
ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ವಾಹನ ಪ್ರೇಮ ಇಡೀ ದೇಶಕ್ಕೇ ಗೊತ್ತು. ಅವರ ಬಳಿ ಇರುವ ಐಷಾರಾಮಿ ಕಾರುಗಳ ಸಾಲಿಗೆ ಈಗ ವಿಮಾನದಂತಹ...








