ಮುಂದಿನ ಮಾಸದಲ್ಲಿ ರೈತರಿಗೆ ಬೆಳೆ ಪರಿಹಾರ : ಹಾಲಪ್ಪ ಆಚಾರ್
ರಯಚೂರು/ಕೊಪ್ಪಳ : ಕಳೆದ ಕೆಲದಿನಗಳಿಂದ ಬಿಡುವಿಲ್ಲದೇ ಸುರಿದ ಮಳೆಗೆ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಬೆಳೆ ಹಾನಿ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಮಂಗಳವಾರ ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಬೆಳೆಹಾನಿ ಉಂಟಾಗಿದೆ.
ನೀರಾವರಿ ಹಾಗೂ ಒಣ ಬೇಸಾಯದ ಬೆಳೆಗಳನ್ನು ಸಹ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಈ ತಿಂಗಳ 30ರೊಳಗೆ ಹಾನಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು, ಮುಂದಿನ ಮಾಸದಲ್ಲಿ ರೈತರಿಗೆ ಪರಿಹಾರ ದೊರೆಯುವ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.