ಹಾವೇರಿ: ಬ್ಯಾಂಕ್ನ (Bank) ಸಿಬ್ಬಂದಿಯೊಬ್ಬರು ಗ್ರಾಹಕರಿಗೆ ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಗ್ರಾಹಕರ ಎಫ್ಡಿ ಹಣ (Money), ಚಿನ್ನದ ಲೋನ್ನ ಹಣ ಸೇರಿದಂತೆ ಖಾತೆಗೆ ಹಾಕಿದ್ದ ಹಣವನ್ನೇ ಸಿಬ್ಬಂದಿ ವಂಚಿಸಿದ್ದಾರೆ ಎನ್ನಲಾಗಿದ್ದು, ಕುರುಬಗೊಂಡು ಗ್ರಾಮದ ಯೂನಿಯನ್ ಬ್ಯಾಂಕ್ನ ಹಳೆಯ ಮ್ಯಾನೇಜರ್ ಈ ಪ್ರಕರಣದ ಆರೋಪಿಯಾಗಿದ್ದು, ಸದ್ಯ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ಅರ್ಚನಾ ಬೇಟಗೇರಿ ಬಂಧಿತ ಆರೋಪಿ ಎನ್ನಲಾಗಿದೆ. ಬಂಧಿತ ಸಿಬ್ಬಂದಿ ಬ್ಯಾಂಕ್ ನಲ್ಲಿ ಗ್ರಾಹಕರ ಎಫ್ಡಿ ಹಣ, ಚಿನ್ನದ ಲೋನ್ ಹಣ ಹಾಗೂ ಖಾತೆಗೆ ಜಮೆ ಮಾಡಿದ ಹಣಕ್ಕೆ ರಶೀದಿ ಹಾಗೂ ಎಫ್ಡಿಗೆ ಬಾಂಡ್ ನೀಡದೆ ವಂಚಿಸಿದ್ದಾರೆ ಎನ್ನಲಾಗಿದೆ. ಈ ರೀತಿಯಾಗಿ ಬರೋಬ್ಬರಿ 1.62 ಕೋಟಿ ರೂ ಹಣ ವಂಚಿಸಿದ್ದಾಳೆ ಎನ್ನಲಾಗಿದೆ.
ಈ ಕುರಿತು ನೂತನ ಬ್ಯಾಂಕ್ ಮ್ಯಾನೇಜರ್ ರವಿರಾಜ್ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.