ಬೆಂಗಳೂರು : ಯಡಿಯೂರಪ್ಪ ಸಿಎಂ ಆದ್ರೆ ಅವರ ಮನೆ ಮುಂದೆ ವಾಚ್ ಮ್ಯಾನ್ ಆಗುತ್ತೇನೆ ಎಂಬ ಜಮೀರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ ಆಗುತ್ತಿದೆ. ಯಡಿಯೂರಪ್ಪ ಅವರ ಮನೆ ಮುಂದೆ ವಾಚ್ ಮ್ಯಾನ್ ಕೆಲಸ ಖಾಲಿ ಇದೆ. ಯಾವಾಗ ಮಾಚ್ ಮ್ಯಾನ್ ಆಗುತ್ತೀರಾ ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ಪ್ರಶ್ನಿಸುತ್ತಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೋಶಿಯಲ್ ಮೀಡಿಯಾದಲ್ಲಿ ಜಮೀರ್ ಹೇಳಿಕೆ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ಈಗ ಆಸ್ತಿ ಬರೆದುಕೊಡುತ್ತೇನೆ ಎಂದು ಜಮೀರ್ ಹೇಳಿದ್ದಾರೆ. ಆದರೆ ಆಸ್ತಿ ಹೇಗೆ ಬಂತು ಎಂದು ಜನರು ಈಗ ಪ್ರಶ್ನಿಸುತ್ತಿದ್ದಾರೆ. ಜಮೀರ್ ಮಾತಿನಲ್ಲಿ ಎಷ್ಟು ಸತ್ಯ ಇರುತ್ತೆ? ಎಂದು ಪ್ರಶ್ನಿಸಿದರು.
ಇದೇ ವೇಳೆ ಕೊಲಂಭೋಗೆ ನೆಮ್ಮದಿಗಾಗಿ ಹೋಗಿದ್ದೆ ಎಂಬ ಜಮೀರ್ ಹೇಳಿಕೆ ಬಗ್ಗೆ ಮಾತನಾಡಿದ ಸಿ.ಟಿ ರವಿ, ಜಮೀರ್ ಅವರು ಕ್ಯಾಸಿನೋಗೆ ಹೋದರೆ ನೆಮ್ಮದಿ ಸಿಗುತ್ತೆ ಎಂದಿದ್ದಾರೆ. ಯಾವ ರೀತಿ ನೆಮ್ಮದಿ ಸಿಗುತ್ತೆ ಅಲ್ಲಿ ಎಂದು ಹೇಳಲಿ. ಈ ಬಗ್ಗೆ ಅವರು ಬೆಳಕು ಚೆಲ್ಲಬೇಕಿದೆ. ಅವರ ಪಾಸ್ ಫೋರ್ಟ್ ಪರಿಶೀಲನೆ ಮಾಡಿಸಬೇಕು. ಅದನ್ನು ಮುಚ್ಚಿಟ್ಟರೆ ಸಂಶಯದ ಸುಳಿಯೊಳಗೆ ಸಿಲುಕಿಕೊಳ್ಳುತ್ತೀರಿ ಎಂದು ಜಮೀರ್ ಗೆ ಪುಕ್ಕಟೆ ಸಲಹೆ ನೀಡಿದರು.
ಇದೇ ಡ್ರಗ್ ಮಾಫಿಯಾ ಪ್ರಕರಣದ ಆರೋಪಿ ಫಾಝಿಲ್ ಜೊತೆ ಸಿದ್ದರಾಮಯ್ಯ ಹಾಗೂ ಜಮೀರ್ ಇರುವ ಫೋಟೋವನ್ನು ಸಿ.ಟಿ.ರವಿ ಪ್ರದರ್ಶಿಸಿದರು.
https://youtu.be/eUpiOvdy6yI?list=UUJKHM6z4CpcN_F-SuK2wPDw