ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

CWC 2023: ಇಂದು ಪಾಕ್ ಗೆ ಸವಾಲು ಒಡ್ಡಲಿರುವ ನೆದರ್ಲೆಂಡ್ಸ್

ವಿಶ್ವಕಪ್ 2ನೇ ಪಂದ್ಯದಲ್ಲಿ ಪಾಕ್ ಸೆಣಸಾಟ

Author2 by Author2
October 6, 2023
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಐಸಿಸಿ ಏಕದಿನ ವಿಶ್ವಕಪ್‌-2023 ಟೂರ್ನಿಯ ಎರಡನೇ ಪಂದ್ಯದಲ್ಲಿ ಇಂದು ಪಾಕಿಸ್ತಾನ ಹಾಗೂ ನೆದರ್ಲೆಂಡ್ಸ್‌ ತಂಡಗಳು ಮುಖಾಮುಖಿ ಆಗುತ್ತಿದ್ದು, ಗೆಲುವಿನ ನಿರೀಕ್ಷೆಯೊಂದಿಗೆ ಅಖಾಡಕ್ಕಿಳಿಯಲು ಉಭಯ ತಂಡಗಳು ಸಜ್ಜಾಗಿವೆ.

ಹೈದ್ರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಎರಡು ತಂಡಗಳು ಕಠಿಣ ಅಭ್ಯಾಸ ನಡೆಸಿವೆ. ಮೇಲ್ನೋಟಕ್ಕೆ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲುವ ಫೇವರೆಟ್‌ ತಂಡವಾಗಿದ್ದರು, ಕ್ರಿಕೆಟ್‌ ಅಂಗಳದಲ್ಲಿ ಯಾವುದೇ ತಂಡಕ್ಕೂ ಟಕ್ಕರ್‌ ಕೊಡುವ ಸಾಮರ್ಥ್ಯ ನೆದರ್ಲೆಂಡ್ಸ್‌ ತಂಡಕ್ಕಿದ್ದು, ಅಷ್ಟು ಸುಲಭವಾಗಿ ಪರಿಗಣಿಸಲು ಸಾಧ್ಯವಿಲ್ಲ. ಹೀಗಾಗಿ ಹೈದ್ರಾಬಾದ್‌ ಅಂಗಳದಲ್ಲಿ ಎರಡು ತಂಡಗಳು ಪ್ರಬಲ ಪೈಪೋಟಿ ನಡೆಸುವ ನಿರೀಕ್ಷೆ ಇದೆ.

Related posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

August 10, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಏಳು ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ, ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಅತ್ಯಂತ ಬಲಿಷ್ಠವಾಗಿದೆ. ಏಷ್ಯಾಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ಪಾಕಿಸ್ತಾನ, ವಿಶ್ವಕಪ್‌ನ ಎರಡು ಅಭ್ಯಾಸ ಪಂದ್ಯಗಳಲ್ಲೂ ಸಹ ಸೋಲಿನ ಆಘಾತ ಕಂಡಿದೆ. ಇದು ಸಹಜವಾಗಿಯೇ ಪಾಕ್‌ ತಂಡದ ಆತ್ಮವಿಶ್ವಾಸವನ್ನ ಕುಗ್ಗಿಸಿದೆ. ಹೀಗಾಗಿ ನೆದರ್ಲೆಂಡ್ಸ್‌ ವಿರುದ್ಧದ ಇಂದಿನ ಪಂದ್ಯವನ್ನ ಗೆದ್ದು, ಗೆಲುವಿನ ಲಯ ಕಂಡುಕೊಳ್ಳುವುದು ಪಾಕ್‌ ತಂಡದ ಲೆಕ್ಕಾಚಾರವಾಗಿದೆ.

ನಸೀಮ್‌ ಶಾ ಅನುಪಸ್ಥಿತಿ ಹಾಗೂ ಸ್ಪಿನ್‌ ಬೌಲರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಪಾಕ್‌ ಪಡೆಯ ಬೌಲಿಂಗ್‌ ವಿಭಾಗದ ಚಿಂತೆ ಹೆಚ್ಚಿಸಿದೆ. ಅಲ್ಲದೇ ಇದರಿಂದಾಗಿ ವೇಗದ ಬೌಲರ್‌ಗಳಾದ ಶಾಹೀನ್‌ ಅಫ್ರಿದಿ, ಹ್ಯಾರಿಸ್‌ ರೌಫ್‌ ಅವರ ಮೇಲೆ ಒತ್ತಡ ಹೆಚ್ಚುವಂತೆ ಮಾಡಿದೆ. ಬ್ಯಾಟಿಂಗ್‌ ವಿಭಾಗದಲ್ಲೂ ಸಾಕಷ್ಟು ಸಮಸ್ಯೆ ಕಾಡುತ್ತಿದ್ದು, ಪ್ರಮುಖ ಬ್ಯಾಟರ್‌ಗಳು ನಿರೀಕ್ಷಿತ ಪ್ರದರ್ಶನ ನೀಡದೆ ಇರುವುದು ನಾಯಕ ಬಾಬರ್‌ ಆಜ಼ಂ ಮೇಲಿನ ಒತ್ತಡ ಹೆಚ್ಚಾಗಿಸಿದೆ.

ಮತ್ತೊಂದೆಡೆ ಮಹತ್ವದ ಟೂರ್ನಿಯಲ್ಲಿ ಭಾಗವಹಿಸಲು 12 ವರ್ಷಗಳ ಬಳಿಕ ನೆದರ್ಲೆಂಡ್ಸ್‌ ತಂಡ ಭಾರತಕ್ಕೆ ಆಗಮಿಸಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ಪಂದ್ಯಾವಳಿಗಳನ್ನ ಆಡದ ನೆದರ್ಲೆಂಡ್ಸ್‌, ಪ್ರಮುಖ ಆಟಗಾರರ ಅನುಪಸ್ಥಿತಿಯೊಂದಿಗೆ ವಿಶ್ವಕಪ್‌ನಲ್ಲಿ ಕಣಕ್ಕಿಳಿಯುತ್ತಿದೆ. ವಿಶ್ವಕಪ್‌ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿರುವ ನೆದರ್ಲೆಂಡ್ಸ್‌ ತಂಡ, ಕರ್ನಾಟಕ ತಂಡದ ವಿರುದ್ಧ ಕೆಲವು ಪಂದ್ಯಗಳನ್ನ ಆಡಿತ್ತು. ಆದರೆ ನೆದರ್ಲೆಂಡ್ಸ್‌ ಆಡಬೇಕಿದ್ದ ವಿಶ್ವಕಪ್‌ನ ಎರಡು ಅಭ್ಯಾಸ ಪಂದ್ಯಗಳು ಮಳೆಯಿಂದಾಗಿ ರದ್ದುಗೊಂಡಿತ್ತು. ಈ ಎಲ್ಲದರ ನಡುವೆಯೂ ಪಾಕ್‌ ವಿರುದ್ಧದ ಪಂದ್ಯಕ್ಕೆ ಸಜ್ಜಾಗಿರುವ ನೆದರ್ಲೆಂಡ್ಸ್‌, ಆರಂಭಿಕ ಪಂದ್ಯದಲ್ಲಿ ಅಚ್ಚರಿಯ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ.
ನೆದರ್ಲ್ಯಾಂಡ್ಸ್ ತಂಡ:
ಸ್ಕಾಟ್ ಎಡ್ವರ್ಡ್ಸ್(ನಾಯಕ), ಮ್ಯಾಕ್ಸ್ ಒಡೌಡ್, ಬಾಸ್ ಡಿ ಲೀಡೆ, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್‌ಮನ್, ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್.
ಪಾಕಿಸ್ತಾನ ತಂಡ:
ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ಅಫ್ರಿದಿ ವಾಸಿಂ.

Tags: CWC 2023NetherlandsPakistansports karnatakaWorld Cup
ShareTweetSendShare
Join us on:

Related Posts

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram