ಕಡಲಿನ ಅಬ್ಬರಕ್ಕೆ ಸಿಲುಕಿದ ಮತ್ತೊಂದು ಬೋಟ್ ಪತ್ತೆ
ಉಡುಪಿ : ತೌಕ್ತೆ ಚಂಡಮಾರುತದಿಂದ ನಿನ್ನೆ ಕಡಲಿನ ಅಬ್ಬರಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಬೋಟ್ ಪತ್ತೆಯಾಗಿದೆ.
ಕಾಪು ಬೀಚ್ನಿಂದ 25 ನಾಟಿಕಲ್ ಮೈಲ್ ದೂರದಲ್ಲಿ ಬೋಟ್ ಪತ್ತೆಯಾಗಿದ್ದು, ಬೋಟ್ನಲ್ಲಿದ್ದ 9 ಮಂದಿ ಸುರಕ್ಷಿತವಾಗಿದ್ದಾರೆ.
ಬೋಟ್ ನಲ್ಲಿರುವ 9 ಮಂದಿ ರಕ್ಷಣೆಗಾಗಿ ಸೆಲ್ಫಿ ವಿಡಿಯೋ ಮಾಡಿ ಕೋಸ್ಟ್ ಗಾರ್ಡ್ ಸಿಬ್ಬಂದಿಗೆ ಕಳುಹಿಸಿದ್ದಾರೆ.
ಸದ್ಯ ಬೋಟ್ ನಲ್ಲಿ ಸುರಕ್ಷಿತವಾಗಿರುವ 9 ಮಂದಿ ಸಿಬ್ಬಂದಿಯನ್ನು ಸುರಕ್ಷಿತವಾಗಿ ದಡಕ್ಕೆ ಕರೆತರಲು ಕೋಸ್ಟ್ ಗಾರ್ಡ್ ಸಿಬ್ಬಂದಿ ಪ್ರಯತ್ನ ಮಾಡುತ್ತಿದೆ.
ಕರಾವಳಿ ಕಾವಲುಪಡೆ ಪೊಲೀಸರಿಗೆ ವೀಡಿಯೋ ರವಾನೆ ಮಾಡಲಾಗಿದೆ. ರಕ್ಷಣಾ ಕಾರ್ಯಚರಣೆ ಕಡಲ ಅಲೆಗಳ ಅಬ್ಬರ ಅಡ್ಡಿಯಾಗಿದೆ.
ಸಮುದ್ರ ಅಬ್ಬರ ಕಡಿಮೆಯಾದ ಬಳಿಕ ರಕ್ಷಣಾ ಕಾರ್ಯಚರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಇನ್ನು ಸ್ಥಳಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ್, ಶಾಸಕ, ಎಸ್ಪಿ ಎಸ್.ವಿಷ್ಣುವರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.