ತೌಕ್ತೆ ಎಫೆಕ್ಟ್ : ಹೆದ್ದಾರಿಯಲ್ಲಿ ಸಾಲಾಗಿ ಬಿದ್ದ ಲೈಟ್ ಕಂಬಗಳು
ಚಿಕ್ಕಮಗಳೂರು : ತೌಕ್ತೆ ಚಂಡಮಾರುತ ಅಬ್ಬರಕ್ಕೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 173ರಲ್ಲಿ 10ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಸಾಲಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿವೆ.
ಮಲೆನಾಡು ಭಾಗದಲ್ಲಿ ತೌಕ್ತೆ ಅಬ್ಬರ ಜೋರಾಗಿದ್ದು, ಚಂಡಮಾರುತದ ಪರಿಣಾಮ ಜಿಲ್ಲೆಯ ಮಲೆನಾಡು ಭಾಗದಲ್ಲಿ ಬೆಳಗ್ಗಿಯಿಂದಲೂ ಬಿಟ್ಟುಬಿಡದೇ ಮಳೆ ಸುರಿಯುತ್ತಿದೆ.
ಬಿದರಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಒಂದೇ ಕಡೆ ಬರೋಬ್ಬರಿ 10 ದೊಡ್ಡ-ದೊಡ್ಡ ವಿದ್ಯುತ್ ಕಂಬಗಳು ಧರೆಗುರುಳಿವೆ.
ಚಿಕ್ಕಮಗಳೂರು ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ನಿನ್ನೆ ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣವಿದ್ದು, ಇಡೀ ದಿನ ತುಂತುರು ಮಳೆ ಸುರಿದಿತ್ತು. ಇಂದು ಕೂಡ ಮಳೆ ಬೀಳುತ್ತಿದೆ. ಇದರಿಂದ ಜನರಲ್ಲಿ ಆತಂಕ ಶುರು ಮಾಡಿದೆ.