ಹುಬ್ಬಳ್ಳಿ: ಉಣಕಲ್ನ ಅಚ್ಚವ್ವ ಕಾಲೊನಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಮತ್ತೊಬ್ಬರು ಅಯ್ಯಪ್ಪ ಮಾಲಾಧಾರಿ (Ayyappa Devotees) ಸಾವನ್ನಪ್ಪಿದ್ದು, ಆ ಮೂಲಕ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ರಾಜೂ ಮೂಗೇರಿ (16) ಮೃತಪಟ್ಟ ಬಾಲಕ. ಮೊದಲು ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಕಾರಿಯಾಗದೇ ಮಾಲಾಧಾರಿ ಬಾಲಕ ಸಾವನ್ನಪ್ಪಿದ್ದಾರೆ.
ಇನ್ನುಳಿದ ಐವರು ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯ ಉಣಕಲ್ನ ಅಚ್ಚವ್ವ ಕಾಲೊನಿಯಲ್ಲಿ ಸಿಲಿಂಡರ್ ಸೋರಿಕೆಯಿಂದಾಗಿ ಒಂಬತ್ತು ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರಗೊಂಡಿದ್ದರು. ಈ ಪೈಕಿ ನಿನ್ನೆ ಇಬ್ಬರು ಹಾಗೂ ಇಂದು ಇಬ್ಬರು ಮಾಲಾಧಾರಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ, ಇನ್ನುಳಿದ ಮಾಲಾಧಾರಿಗಳ ಸ್ಥಿತಿ ಕೂಡ ಗಂಭೀರವಾಗಿದೆ ಎನ್ನಲಾಗಿದೆ. ಸದ್ಯ ಇನ್ನುಳಿದ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.
ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...








