ಬೆಂಗಳೂರು: ಪುಲಕೇಶಿ ನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಗಿರುವ ಮಾಜಿ ಮೇಯರ್ ಸಂಪತ್ ರಾಜ್ ರಾತ್ರೋರಾತ್ರಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ನಾಪತ್ತೆಯಾಗಿದ್ದಾರೆ ಎಂದು ಎಂಬ ಆರೋಪ ಕೇಳಿ ಬಂದಿದೆ.
ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಸಂಪತ್ ರಾಜ್ಗೆ ನೋಟಿಸ್ ನೀಡಿದ್ದರು. ಆದರೆ, ಕೊರೊನಾ ಪಾಸಿಟಿವ್ ಎಂದು ಬೆಂಗಳೂರಿನ ಹೆಬ್ಬಾಳದಲ್ಲಿರುವ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದ ಸಂಪತ್ ರಾಜ್ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಸಿಸಿಬಿ ಅಧಿಕಾರಿಗಳಿಂದ ಬಂಧನ ಭೀತಿ ಎದುರಿಸುತ್ತಿರುವ ಸಂಪತ್ ರಾಜ್, ರಾತ್ರೋರಾತ್ರಿ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿ ಪರಾರಿಯಾಗಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಗುರುವಾರ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿಸಿಬಿ ತಂಡಕ್ಕೆ ಶಾಕ್ ಬುಧವಾರ ಮಧ್ಯರಾತ್ರಿಯೇ ಸಂಪತ್ ರಾಜ್ ಡಿಶ್ಚಾರ್ಜ್ ಆಗಿರುವ ವಿಚಾರ ಅಚ್ಚರಿಗೆ ಕಾರಣವಾಗಿದೆ. ಸಿಸಿಬಿ ಎಸಿಪಿ ವೇಣುಗೋಪಾಲ್ ಆಸ್ಪತ್ರೆಗೆ ಭೇಟಿ ನೀಡಿದಾಗ ಸಂಪತ್ ರಾಜ್ ಡಿಶ್ಚಾರ್ಜ್ ಆಗಿರುವುದು ಬೆಳಕಿಗೆ ಬಂದಿದೆ.
ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಸಿಸಿಬಿ ನೋಟಿಸ್..!
ಸಂಪತ್ ರಾಜ್ ಡಿಶ್ಚಾರ್ಜ್ ಮಾಡುವ ಮುನ್ನ ಸಿಸಿಬಿ ಅಧಿಕಾರಿಗಳ ಗಮನಕ್ಕೆ ತರುವಂತೆ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ ಸಿಸಿಬಿ ಗಮನಕ್ಕೆ ತರದೇ ರಾತ್ರೋರಾತ್ರಿ ಸಂಪತ್ ರಾಜ್ ಡಿಸ್ಚಾರ್ಜ್ ಆಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಾಕ್ಸ್ಟೌನ್ನಲ್ಲಿರುವ ಸಂಪತ್ ರಾಜ್ ಮನೆಗೆ ಬೀಗ ಹಾಕಿದ್ದು, ಸಿಸಿಬಿ ತಂಡ ಸಂಪತ್ ರಾಜ್ ಗಾಗಿ ಹುಡುಕಾಟ ನಡೆಸಿದೆ.
ತಮ್ಮ ಗಮನಕ್ಕೆ ತಾರದೇ ಡಿಶ್ಚಾರ್ಜ್ ಮಾಡಿರುವ ಆರೋಪದಡಿ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ. ಶನಿವಾರ ವಿಚಾರಣೆಗೆ ಹಾಜರಾಗಲು ಬ್ಯಾಪಿಸ್ಟ್ ಆಸ್ಪತ್ರೆಯ ಸಿಬ್ಬಂದಿಗೆ ಸಿಸಿಬಿ ಪೊಲಿಸರು ನೋಟಿಸ್ ನೀಡಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿದ ಸಿಸಿಬಿ ತಂಡಕ್ಕೆ ಆಘಾತಕಾರಿ ಮಾಹಿತಿ ಸಿಕ್ಕಿದೆ. ಸಂಪತ್ ರಾಜ್ ಮೆಡಿಕಲ್ ರಿಪೋರ್ಟ್ರಿ ನಲ್ಲಿ ಸೆಪ್ಟೆಂಬರ್ 14 ರಂದು ಅಸ್ಪತ್ರೆಗೆ ದಾಖಲಾಗಿದ್ದರು. ಒಂದೇ ತಿಂಗಳಲ್ಲಿ 4 ಬಾರಿ ಅಡ್ಮಿಟ್ ಆಗಿ, 4 ಬಾರಿ ಡಿಸ್ಚಾರ್ಜ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಮೆಡಿಕಲ್ ರಿಪೆÇೀರ್ಟ್ ಸೀಜ್ ಮಾಡಿ ಪರಿಶೀಲನೆ ನಡೆಸುತ್ತಿದೆ. ಹಾಗೆಯೇ ಸಂಪತ್ ರಾಜ್ಗೆ ಚಿಕಿತ್ಸೆ ನೀಡಿದ ವೈದ್ಯರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಸಂಪತ್ ರಾಜ್ ಕೇರಳ ಕಡೆ ಪರಾರಿಯಾಗಿರುವ ಶಂಕೆ ಹಿನ್ನಲೆ ಸಿಸಿಬಿ ತಂಡ ಹುಡುಕಾಟ ನಡೆಸಿದೆ.
ಸಂಪತ್ರಾಜ್ ನಾಪತ್ತೆಯಾಗಿದ್ದೇಕೆ..?
ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಸಂಬಂಧ ಸಿಸಿಬಿ ಪೆÇಲೀಸರು ನ್ಯಾಯಾಲಯಕ್ಕೆ 50 ಪುಟಗಳ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಸಿದ್ದರು. ಚಾರ್ಜ್ಶೀಟ್ನಲ್ಲಿ ಸಂಪತ್ ರಾಜ್ 51ನೇ ಆರೋಪಿಯಾಗಿದ್ದರೆ, ಮಾಜಿ ಪಾಲಿಕೆ ಸದಸ್ಯ ಝಾಕೀರ್ 52ನೇ ಆರೋಪಿಯಾಗಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಾಕಲು ಸಂಪತ್ ರಾಜ್ ನೇರ ಪಾತ್ರವಿದೆ. ಅಖಂಡ ಶ್ರೀನಿವಾಸಮೂರ್ತಿ ಅವರನ್ನು ರಾಜಕೀಯವಾಗಿ ಬೆಳೆಯಲು ಬಿಡದೆ ಕೆಟ್ಟಹೆಸರು ತರಲು ಮನೆಗೆ ಸಂಪತ್ ರಾಜ್ ಬೆಂಕಿ ಹಚ್ಚಿಸಿದ್ದಾರೆ. ಹೀಗಾಗಿ ಸಂಪತ್ ರಾಜ್ ಗಲಾಟೆ ಹಿಂದಿನ ಮಾಸ್ಟರ್ ಮೈಂಡ್ ಎಂದು ಚಾರ್ಜ್ಶೀಟ್ನಲ್ಲಿ ಸಿಸಿಬಿ ಪೊಲೀಸರು ಉಲ್ಲೇಖಿಸಿದ್ದಾರೆ. ಹೀಗಾಗಿ ವಿಚಾರಣೆಗೆ ಹೋದರೆ ಬಂಧನಕ್ಕೊಳಗಾಗುವುದು ಪಕ್ಕಾ ಎಂದೇ ಸಂಪತ್ ರಾಜ್ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಸಂಪತ್ ರಾಜ್ ವಿಚಾರಣೆಗೆ ಬರುವಂತೆ ಎರಡನೇ ಬಾರಿ ನೋಟಿಸ್ ನೀಡಲಾಗಿದೆ ಎಂದು ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel