`ಯಾರು ಏನ್ ಬೇಕಾದ್ರು ಹೇಳಿಕೊಳ್ಳಲಿ ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಪಕ್ಕಾ’
ತುಮಕೂರು : ಯಾರು ಏನ್ ಬೇಕಾದ್ರು ಹೇಳಿಕೊಳ್ಳಲಿ, ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶ್ರೀಗಳಿಗೆ ತಮ್ಮ ಕುಟುಂಬ ಕಾರ್ಯಕ್ರಮದ ಆಮಂತ್ರಣ ನೀಡಲಿಕ್ಕೆ ಡಿ.ಕೆ.ಶಿವಕುಮಾರ್ ಅವರು ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನ್ ಬೇಕಾದ್ರು ಹೇಳಿಕೊಳ್ಳಲಿ, ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಜನವರಿ 20 ರಂದು ರೈತರ ಪರವಾಗಿ ಕಾಂಗ್ರೆಸ್ ಪಕ್ಷ ಬೆಂಬಲ ವ್ಯಕ್ತಪಡಿಸುತ್ತದೆ. ಅಂದು ಬೆಂಗಳೂರಿನ ಫ್ರೀಡಂ ಪಾರ್ಕ್ನ ಸಂಗೊಳ್ಳಿ ರಾಯಣ್ಣ ಸರ್ಕಲ್ ನಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ.
ಇಡೀ ರಾಷ್ಟ್ರದಲ್ಲಿ ಇಂಥ ದೊಡ್ಡ ಹೋರಾಟ ನಡೆದಿರಲಿಲ್ಲ ಎಂದು ತಿಳಿಸಿದರು.
ಇನ್ನು ಇಲ್ಲಿ ಹೇಳೋರಿಲ್ಲ ಕೇಳೋರಿಲ್ಲ, ಕಮಿಟಿ ಮಾಡಿರೋದನ್ನ ರೈತರು ಧಿಕ್ಕರಿಸಿದ್ದಾರೆ. ನಮಗೆ ಅವಶ್ಯಕತೆ ಇಲ್ಲ ಎಂದು ಹೋರಾಟ ಮುಂದುವರೆಸಿದ್ದಾರೆ.
ಇದು ರೈತ ಸಮುದಾಯಕ್ಕೆ, ದೇಶಕ್ಕೆ ಮರಣ ಶಾಸನವಾಗಿದೆ ಎಂದು ಆರೋಪಿಸಿದ ಡಿಕೆಶಿ, ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ನಾವೆಲ್ಲಾ ಹೋರಾಟ ಮಾಡ್ತೇವೆ ಎಂದು ತಿಳಿಸಿದರು.
ಇದೇ ವೇಳೆ ನಿನ್ನೆ ಅಮಿತ್ ಶಾ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕನ್ನಡ ಫಲಕ ಇರಲಿಲ್ಲ ಎಂಬ ವಿಚಾರವಾಗಿ ಮಾತನಾಡಿ, ಬಿಜೆಪಿಯಲ್ಲಿ ಪ್ರದೇಶಿಕ ಸಂಸ್ಕøತಿಗೆ ಬೆಲೆ ಇಲ್ಲ. ಸ್ವಂತ ಅಜೆಂಡಾ ಮೇಲೆ ಸರ್ಕಾರ ನಡೀತಿದೆ. ಸಾರ್ವಜನಿಕರ ಅಭಿಪ್ರಾಯದಂತೆ ನಡೀತಿಲ್ಲ.
ಅಮಿತ್ ಶಾ ವೇದಿಕೆಯಲ್ಲಿ ಕನ್ನಡ ಭಾಷೆಗೆ ಪ್ರಾಧಾನ್ಯತೆ ಕೊಟ್ಟಿಲ್ಲ. ಪ್ರಾದೇಶಿಕ ಸಂಸ್ಕೃತಿ, ಭಾಷೆ ಯಾವುದೂ ಅವರಿಗೆ ಬೇಕಿಲ್ಲದಂತಾಗಿದೆ. ನಮ್ಮ ಎಂಪಿಗಳು ಅಧಿಕಾರಕ್ಕಾಗಿ ಬಾಯಿ ಮುಚ್ಚಿಕೊಂಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel