ಮೇಕೆದಾಟು ವಿಚಾರದಲ್ಲಿ ಡಿಕೆಶಿ ರಾಜಕಾರಣ : ಬಿಜೆಪಿ ಆರೋಪ D K Shivakumar saaksha tv
ಬೆಂಗಳೂರು : ಮೇಕೆದಾಟು ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಮೇಕೆದಾಟು ವಿಚಾರವಾಗಿ ಜನವರಿ ಮೊದಲ ವಾರ ಕಾಂಗ್ರೆಸ್ ಪಾದಯಾತ್ರೆ ನಡೆಸಲಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಮೇಕೆದಾಟು ಯೋಜನೆ ನಿರಂತರ ಪ್ರಕ್ರಿಯೆ. ಅದರ ಅನುಷ್ಠಾನ ರಾಜ್ಯ ಸರ್ಕಾರದ ಬದ್ಧತೆಯೂ ಹೌದು…! ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಿನಾ ಕಾರಣ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ.
ಡಿಕೆಶಿ ಅವರೇ, ನೀವು ಆಯೋಜಿಸಿರುವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗುವ ಸಾಧ್ಯತೆಯಿದೆಯೇ ಎಂದು ಕುಟುಕಿದೆ.
ಇನ್ನು ಮೇಕೆದಾಟು ಯೋಜನೆ ಜಾರಿಗಾಗಿ ಆಯೋಜಿಸಿರುವ ಪಾದಯಾತ್ರೆಯನ್ನು ಡಿ.ಕೆ.ಶಿವಕುಮಾರ್ ಸ್ವಾತಂತ್ರ್ಯ ಚಳುವಳಿಗೆ ಹೋಲಿಸಿಕೊಂಡಿದ್ದಾರೆ.
ಈ ಹೋರಾಟದಲ್ಲಿ ಭಾಗಿಯಾಗುವ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಮಾಣಪತ್ರ ನೀಡಲಿದ್ದಾರಂತೆ!
ಇತಿಹಾಸ ಹಾಗೂ ಅಧ್ಯಯನದ ಕೊರತೆ ಮನುಷ್ಯನನ್ನು ಯಾವ ಹಂತಕ್ಕೂ ಕರೆದೊಯ್ಯಬಹುದೆಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ ಎಂದು ಬಿಜೆಪಿ ಪ್ರಶ್ನಿಸಿದೆ.