ನಾನು ಗ್ರಾನೈಟ್ ಹಿನ್ನೆಲೆಯಿಂದ ಬಂದವನು : “ಕನಕಪುರ ಬಂಡೆ”
ಬೆಂಗಳೂರು : ನಾನು ಗ್ರಾನೈಟ್ ಹಿನ್ನೆಲೆಯಿಂದ ಬಂದವನು. ಅಷ್ಟು ದೊಡ್ಡ ಪ್ರಮಾಣದ ಗ್ರಾನೈಟ್ ಹೇಗೆ ಸಂಗ್ರಹಿಸಿಟ್ಟಿದ್ದರು ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಶಿವಮೊಗ್ಗ ದುರಂತ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ದುರಂತದ ಸ್ಥಳಕ್ಕೆ ಸಿಎಂ ತಕ್ಷಣವೇ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.
ಅಲ್ಲಿ ನಡೆದಿರುವ ಅವಘಡ ಮತ್ತು ನೋವಿನ ಕುರಿತಾಗಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು. ನಾನು ಗ್ರಾನೈಟ್ ಹಿನ್ನೆಲೆಯಿಂದ ಬಂದವನು.
ಅಷ್ಟು ದೊಡ್ಡ ಪ್ರಮಾಣದ ಗ್ರಾನೈಟ್ ಹೇಗೆ ಸಂಗ್ರಹಿಸಿಟ್ಟಿದ್ದರು ಎಂದು ಪ್ರಶ್ನಿಸಿದರು.
ಒಂದು ಕಡೆಯಿಂದ ಮತ್ತೊಂದು ಕಡೆ ಗ್ರಾನೈಟ್ ಸಾಗಿಸುವಾಗ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಸದ್ಯ ತನಿಖೆ ನಡೆಸುತ್ತಿದೇವೆ ಅಂದ್ರೆ ಈಗ ನಡೀತಾ ಇರೋ ಲೀಗಲ್ ಆಗಿರೋದನ್ನ ಬಂದ್ ಮಾಡೋದಲ್ಲ. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel