ಪಕ್ಷ ಬಲವರ್ಧನೆಗೆ ಡಿಕೆಶಿ ಪಣ : ನ.22 ರಿಂದ ಹೈದರಾಬಾದ್ ಕರ್ನಾಟಕ ಪ್ರವಾಸ
ಬೆಂಗಳೂರು : ಶಿರಾ ಹಾಗೂ ರಾರಾ ಉಪಚುನಾವಣೆಯಲ್ಲಿ ಹಿನ್ನಡೆ ಬೆನ್ನಲ್ಲೆ ರಾಜ್ಯ ಕಾಂಗ್ರೆಸ್ ಸಾರಥಿ ಡಿ.ಕೆ.ಶಿವಕುಮಾರ್ ಪಕ್ಷ ಬಲವರ್ಧನೆಯತ್ತ ಗಮನ ಹರಿಸಿದ್ದಾರೆ. ಮುಂಬರುವ ಬೆಳಗಾವಿ ಲೋಕಸಭಾ ಚುನಾವಣೆ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟಿಸಲು ಟ್ರಬಲ್ ಶೂಟರ್ ಮುಂದಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇದೇ ನವೆಂಬರ್ 22 ರಿಂದ 25ರವರೆಗೆ ಹೈದರಾಬಾದ್ ಕರ್ನಾಟಕ ಪ್ರವಾಸ ಮಾಡಲಿದ್ದಾರೆ.
ನ.22 ರಂದು ಬೆಳಗ್ಗೆ 7 ಗಂಟೆಗೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಗೆ ಪ್ರಯಾಣ ಬೆಳೆಸುವ ಶಿವಕುಮಾರ್, ಹೊಸಪೇಟೆಯಲ್ಲಿ ಬಳ್ಳಾರಿ ನಗರ ಮತ್ತು ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಯಿಂದ 6 ಗಂಟೆಯವರೆಗೂ ಬಳ್ಳಾರಿ ಜಿಲ್ಲೆಯ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿಯಾಗಲಿದ್ದು, ನಂತರ ರಾತ್ರಿ ಕೊಪ್ಪಳ ಜಿಲ್ಲೆಯ ಶಾಸಕರು, ಪರಾಜಿತ ವಿಧಾನಸಭೆ ಅಭ್ಯರ್ಥಿಗಳು ಹಾಗೂ ಹಿರಿಯ ಮುಖಂಡರನ್ನು ಭೇಟಿ ಮಾಡಿ ಹೊಸಪೇಟೆಯಲ್ಲೇ ವಾಸ್ತವ್ಯ ಹೂಡಲಿದ್ದಾರೆ..
ಸೋತಾಗ ಮತ ಯಂತ್ರವನ್ನು ದೂರುವ ಕಾಂಗ್ರೆಸ್ ಗೆ ಗೆದ್ದಾಗ ಮತಯಂತ್ರ ಸರಿಯಾಗಿರುತ್ತದೆ – ಕೋಟ ಶ್ರೀನಿವಾಸ ಪೂಜಾರಿ
ನ.23 ರಂದು ರಾಯಚೂರು ಜಿಲ್ಲೆಗೆ ತೆರಳಿರುವ ಟ್ರಬಲ್ ಶೂಟರ್, ಮಸ್ಕಿ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಉಪ ಚುನಾಣೆಯ ಬಗ್ಗೆ ರಣತಂತ್ರ ರೂಪಿಸಲಿದ್ದಾರೆ. ಮಧ್ಯಾಹ್ನ ಭತ್ತದ ಪ್ರೋತ್ಸಾಹಧನ ನೀಡಲು ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
ನ.24 ರಂದು ಬೆಳಗ್ಗೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಬಸವಕಲ್ಯಾಣದತ್ತ ಪ್ರಯಾಣ ಬೆಳೆಸಲಿದ್ದಾರೆ. ಬಸವಕಲ್ಯಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಭಾಗವಹಿಸಿಲಿದ್ದಾರೆ.
ಸಂಪುಟ ಸರ್ಜರಿ : ದೆಹಲಿಯತ್ತ ಸಿಎಂ ಬಿಎಸ್ ವೈ
ಮಧ್ಯಾಹ್ನ 3:30ಕ್ಕೆ ಬೀದರ್ ಜಿಲ್ಲೆಗೆ ತೆರಳಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಯ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.
25 ರಂದು ಹೈದರಾಬಾದ್ ನಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel