ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೇಶದಲ್ಲಿ 3 ಲಕ್ಷ ಕೋವಿಡ್ ಕೇಸ್ ಪತ್ತೆ , ಮೂರನೇ ಅಲೆಯಲ್ಲಿ ವಿದ್ಯಾರ್ಥಿಗಳೇ ಟಾರ್ಗೆಟ್, ಬಿಜೆಪಿ – ಕಾಂಗ್ರೆಸ್ ಟ್ವೀಟ್ ವಾರ್ : TOP 10 NEWS

Namratha Rao by Namratha Rao
January 20, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

0.1 ದೇಶದಲ್ಲಿ 3 ಲಕ್ಷ ಕೋವಿಡ್ ಕೇಸ್ ಪತ್ತೆ…

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರುತ್ತಿದ್ದು ಕಳೆದ 24 ಗಂಟೆಗಯಲ್ಲಿ 3.17 ಲಕ್ಷಕ್ಕೂ ಹೆಚ್ಚು (3,17,532) ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ.
ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 19,24,051 ರಷ್ಟಿದ್ದರೆ, ಚೇತರಿಕೆ ದರವು ಶೇಕಡಾ 93.69 ಪ್ರತಿಶತದಷ್ಟಿದೆ.
ಕಳೆದ 24 ಗಂಟೆಯಲ್ಲಿ 2,23,990 ಜನ ಚೇತರಿಸಿಕೊಂಡಿದ್ದಾರೆ. ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 3,58,07,029 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ 491 ಜನ ಸಾವನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 9,287 ಓಮಿಕ್ರಾನ್ ಪ್ರಕರಣಗಳು ವರದಿಯಾಗಿದೆ.

Related posts

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

March 23, 2026
ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

March 23, 2026

0.2 ಕೊರೊನಾ ಮೂರನೇ ಅಲೆಯಲ್ಲಿ ವಿದ್ಯಾರ್ಥಿಗಳೇ ಟಾರ್ಗೆಟ್..!
ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಕೊರೊನಾ ಮೂರನೇ ಅಬ್ಬರ ಜೋರಾಗಿದ್ದು, ವಿದ್ಯಾರ್ಥಿಗಳಲ್ಲಿಯೇ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಮದ್ದೂರು ಸರ್ಕಾರಿ ಪಿಯು ಕಾಲೇಜಿನ 25 ಹಾಗೂ ಸೋಮನಹಳ್ಳಿ GTDC ಕಾಲೇಜಿನ 18 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಉಳಿದ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ. ಸಾಮೂಹಿಕ ಕೋವಿಡ್ ಟೆಸ್ಟ್ ವೇಳೆ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

0.3 ಶಾಲೆಗಳನ್ನು ಪುನರಾರಂಭಿಸಬಹುದು : ಬಿ.ಸಿ ನಾಗೇಶ
ಬೆಂಗಳೂರು: ತಾಂತ್ರಿಕ ಸಲಹಾ ಸಮಿತಿ ಒಪ್ಪಿದರೆ ಬಂದ್ ಆದ ಮಹಾನಗರಗಳಲ್ಲಿನ ಶಾಲೆಗಳನ್ನ ಪುನಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ,ಸಿ ನಾಗೇಶ ಹೇಳಿದ್ದಾರೆ.
ವಿಧಾಸೌಧದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಶಿಕ್ಷಣದ ದೃಷ್ಟಿಯಿಂದ ನೋಡಿದರೆ ಶಾಲೆಗಳನ್ನು ತೆರೆಯಬಹುದು ಎಂದೆನಿಸುತ್ತದೆ ಎಂದು ಹೇಳಿದ್ದಾರೆ.

0.4 ಬಿಜೆಪಿ – ಕಾಂಗ್ರೆಸ್ ಟ್ವೀಟ್ ವಾರ್..!!
ಬೆಂಗಳೂರು : ಕರ್ನಾಟಕವನ್ನು ಕಾಂಗ್ರೆಸ್ ಪಕ್ಷ ಗೂಂಡಾ ರಾಜ್ಯ ಮಾಡಲು ಹೊರಟಂತಿದೆ ಎಂದು ರಾಜ್ಯ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ. ರಕ್ಷಾ ರಾಮಯ್ಯ ಬೆಂಬಲಿಗನ ಮೇಲೆ ನಲಪಾಡ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದ ನಾಯಕರ ಗೂಂಡಾಗಿರಿ ಮತ್ತೆ ಆರಂಭಗೊಂಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಶಿಷ್ಯ ಮಹಮ್ಮದ್ ನಲಪಾಡ್ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಕರ್ನಾಟಕವನ್ನು ಕಾಂಗ್ರೆಸ್ ಪಕ್ಷ ಗೂಂಡಾ ರಾಜ್ಯ ಮಾಡಲು ಹೊರಟಂತಿದೆ ಎಂದು ಟೀಕಿಸಿದೆ.

congress

0.5 ಯುಪಿ ಚುನಾವಣೆ : BJP ಅಭ್ಯರ್ಥಿಗಳ ಪಟ್ಟಿ ರಿಲೀಸ್
ಉತ್ತರಾಖಂಡ್ ವಿಧಾನಸಭಾ ಚುನಾವಣಾ ಪ್ರಯುಕ್ತ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಗುರುವಾರ ದೆಹಲಿಯಲ್ಲಿರುವ ಪಕ್ಷದ ರಾಷ್ಟ್ರೀಯ ಕೇಂದ್ರ ಕಚೇರಿಯಲ್ಲಿ ಚುನಾವಣಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಉತ್ತರಾಖಂಡ್ ರಾಜ್ಯದ 70 ವಿಧಾನಸಭಾ ಸ್ಥಾನಗಳ ಪೈಕಿ 59 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದೆ, ಹಾಲಿ 10 ಎಂ ಎಲ್ ಎ ಗಳಿಗೆ ಟಿಕೆಟ್ ನೀಡದೆ ಶಾಕ್ ನೀಡಿದೆ.

0.6 ಭಾರತೀಯನ ಅಪರಿಸಿದ ಚೀನಾ ಸೈನಿಕರು
ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ) 17 ವರ್ಷದ ಬಾಲಕನನ್ನು ಅಪಹರಿಸಿದೆ. ಅರುಣಾಚಲ ರಾಜ್ಯದ ಸಂಸದ ತಪಿರ್ ಗಾವೊ ಬುಧವಾರ ಈ ಮಾಹಿತಿ ನೀಡಿದ್ದಾರೆ. ಅಪಹರಣಕ್ಕೊಳಗಾದ ಬಾಲಕನ ಹೆಸರು ಮಿರಾಮ್ ಟ್ಯಾರೋನ್ ಎಂದು ಗುರುತಿಸಲಾಗಿದೆ.

0.7 ಮುಂದೆ ವೇಗವಾಗಿ ಹರಡಲಿದೆ ಒಮಿಕ್ರಾನ್ : WHO
ರಜಾದಿನಗಳಲ್ಲಿ ಹೆಚ್ಚಿದ ಸಾಮಾಜಿಕ ಚಟುವಟಿಕೆಗಳು ಮತ್ತು ಜನರ ನಿರ್ಲಕ್ಷ್ಯದಿಂದಾಗಿ ಮುಂಬರುವ ವಾರಗಳಲ್ಲಿ ಒಮಿಕ್ರಾನ್ ಪ್ರಕರಣಗಳಲ್ಲಿ ಏರಿಕೆ ಉಂಟಾಗಬಹುದು. ಆಸ್ಪತ್ರೆಗಳ ಮೇಲೆ ಉತ್ತಡ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಈ ಹಿಂದೆ ಅಂದ್ರೆ ಒಮಿಕ್ರಾನ್ ಹರಡುತ್ತಿದ್ದ ಆರಂಭದಲ್ಲಿ , ಒಮಿಕ್ರಾನ್ ಗಿಂತಲೂ ಡೆಲ್ಟಾ ತೀವ್ರತೆ ಹೆಚ್ಚಿದೆ ಎಂದು WHO ತಿಳಿಸಿತ್ತು.. ಆದರೆ 2021ರ ಆಗಸ್ಟ್ 21ರಲ್ಲಿ ಏರುಗತಿ ಕಂಡಿದ್ದ ಕೋವಿಡ್ ಸಾವಿನ ಪ್ರಕರಣಗಳಲ್ಲಿ ಸದ್ಯ ಇಳಿಕೆ ಕಂಡುಬಂದಿದೆ ಎಂದು ತಿಳಿಸಿದೆ.

badava rascal - saakshatv

0.8 ‘OTT’ಗೆ ಬರುತ್ತಿದ್ದಾನೆ ‘ಬಡವ ರಾಸ್ಕಲ್’
ಬೆಂಗಳೂರು: ಸ್ಯಾಂಡಲ್ ವುಡ್ ನ ನಟ ರಾಕ್ಷಸ ಡಾಲಿ ಧನಂಜಯ ಮೊದಲ ಬಾರಿಗೆ ನಿರ್ಮಾಪಕನಾಗಿ ಗೆದ್ದಿದ್ದಾರೆ. ಈಗ ಅವರೇ ನಿರ್ಮಿಸಿ , ಅಭಿನಯಿಸಿರುವ ‘ಬಡವ ರಾಸ್ಕಲ್’ ಚಿತ್ರವು ಗಣರಾಜ್ಯೋತ್ಸವ (ಜನವರಿ 26) ಕ್ಕೆ ವೂಟ್ ಸೆಲೆಕ್ಟ್ ನಲ್ಲಿ ಪ್ರಸಾರವಾಗಲಿದೆ.

0.8 ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ 3ನೇ ಸ್ಥಾನಕ್ಕೆ ಕುಸಿದ ಭಾರತ
ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ. ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪಟ್ಟಿ ಇಂದು ಬಿಡುಗಡೆಯಾಗಿದ್ದು, ಆ್ಯಶಸ್ನಲ್ಲಿ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಸೋತಿರುವ ಭಾರತ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಎರಡನೇ ಸ್ಥಾನದಲ್ಲಿ ನ್ಯೂಜಿಲೆಂಡ್ ತಂಡವಿದೆ.

0.9 ವಿರಾಟ್ ಕೊಹ್ಲಿ ಹೊಸ ದಾಖಲೆ
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ವಿರಾಟ್ ಕೊಹ್ಲಿ ವಿದೇಶಿ ನೆಲದಲ್ಲಿ ಗರಿಷ್ಠ ರನ್ ದಾಖಲಿಸಿದ್ದ ಭಾರತೀಯ ಆಟಗಾರ ಎಂಬ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ಸಚಿನ್ ತೆಂಡುಲ್ಕರ್ ಅವರ ಹೆಸರಿನಲ್ಲಿತ್ತು. ವಿರಾಟ್ ಕೊಹ್ಲಿ 5068 ರನ್ ದಾಖಲಿಸಿದ್ರೆ, ಸಚಿನ್ ತೆಂಡುಲ್ಕರ್ 5065 ರನ್ ಗಳಿಸಿದ್ದರು.

10. ಅವನಿಗೆ XUV-700 ಕಾರ್ ಉಡುಗೊರೆ
ಟೋಕಿಯೊ ಪ್ಯಾರಾಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಅವನಿ ಲೆಖರಾ ಅವರಿಗೆ ವಿಶೇಷ ಕಾರನ್ನು ಉಡುಗೊರೆಯಾಗಿ ನೀಡುವುದಾಗಿ ಆನಂದ್ ಮಹೀಂದ್ರಾ ಭರವಸೆ ನೀಡಿದ್ದರು. ಅದೇ ರೀತಿ ಬುಧವಾರ ಆನಂದ್ ಮಹೀಂದ್ರಾ, ತಮ್ಮ ಭರವಸೆಯನ್ನು ಈಡೇರಿಸಿದ್ದಾರೆ. ಅವನಿ ಲೇಖರಾ ಅವರಿಗಾಗಿ ವಿಶೇಷ ಕಸ್ಟಮೈಸ್ ಮಾಡಿದ XUV-700 ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದರಲ್ಲಿ ವಿಶೇಷ ಹೈಡ್ರಾಲಿಕ್ ಸೀಟ್ ಅಳವಡಿಸಲಾಗಿದ್ದು, ಅವನಿ ಸುಲಭವಾಗಿ ಕಾರಿನಲ್ಲಿ ಹತ್ತಬಹುದು ಮತ್ತು ಇಳಿಯಬಹುದು

Tags: #saakshatvCinemadaily updatesindiaInternationalkarnatakaNationalpoliticsSportstop news
ShareTweetSendShare
Join us on:

Related Posts

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

by Shwetha
March 23, 2026
0

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ...

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

by Shwetha
March 23, 2026
0

ಕರುನಾಡಿನ ಪ್ರೇಕ್ಷಕರ ನಾಡಿಮಿಡಿತ ಅರಿತ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕಾಂಬಿನೇಷನ್ ಅಂದರೆ ಅಲ್ಲಿ ಮ್ಯಾಜಿಕ್ ಗ್ಯಾರಂಟಿ. ಲವ್ ಮಾಕ್ಟೇಲ್ ಸರಣಿಯ ಮೂಲಕ...

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

by Shwetha
March 23, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಬೃಹತ್ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಭಾನುವಾರ ಭಾರತದಲ್ಲಿ ಅತ್ಯಂತ ದೀರ್ಘಕಾಲದವರೆಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ...

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

by Shwetha
March 23, 2026
0

ಪಾಕಿಸ್ತಾನದ ನಾಯಕರು ಮತ್ತು ಅಧಿಕಾರಿಗಳ ಬಾಯಲ್ಲಿ ಭಾರತದ ಮೇಲಿನ ದ್ವೇಷ ಆಗಾಗ್ಗೆ ಹೊರಬೀಳುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ ಪಾಕಿಸ್ತಾನದ ಮಾಜಿ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದ ಅಬ್ದುಲ್ ಬಾಸಿತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram