ಮಂಗಳೂರು: ಗೋಕಳ್ಳರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಆದೇಶಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ತಾಣಗಳಲ್ಲಿ ಕೊಲೆ ಬೆದರಿಕೆ ಬಂದಿರುವ ಮಾಹಿತಿ ಲಭ್ಯವಾಗಿದೆ. ಅಕ್ರಮ ಗೋ ಸಾಗಾಟ ನಡೆಸುವವರನ್ನು ಪೋಲೀಸರಿಗೆ ಒಪ್ಪಿಸಬೇಕು, ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದ್ದ ಸಭೆಯಲ್ಲಿ ಸಿಂಧೂ ಬಿ. ರೂಪೇಶ್ ಅವರು ತಿಳಿಸಿದ್ದರು. ಅಲ್ಲದೆ ಜಾನುವಾರು ಸಾಗಾಟ ಮಾಡುವ ವಾಹನದ ಹಾಗೂ ಜನರ ಮೇಲೆ ಹಲ್ಲೆ ನಡೆಸಿದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಇದೀಗ ಜಿಲ್ಲಾಧಿಕಾರಿಗಳನ್ನು ಕೊಲೆ ಮಾಡಬೇಕು ಎಂದು ತುಳುವಿನಲ್ಲಿ ಹಾಕಿದ್ದ ಪೋಸ್ಟ್ ಒಂದು ಹರಿದಾಡ್ತಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ. ಮಂಗಳೂರು ಉಪ ಆಯುಕ್ತರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈಗಾಗಲೇ ತನಿಖೆ ಆರಂಭಿಸಿದ್ದು, ಈ ಬಗ್ಗೆ ಡಿಸಿ ಜೊತೆ ಚರ್ಚಿಸುತ್ತೇವೆ. ಒಂದು ವೇಳೆ ಅವರು ದೂರು ನೀಡಿದರೆ ಪ್ರಕರಣ ದಾಖಲಿಸಿಕೊಳ್ಳುತ್ತೇವೆ. ಇಲ್ಲದೇ ಹೋದಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತೆ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...








