ದಕ್ಷಿಣ ಕನ್ನಡದಲ್ಲಿ ಇಂದೂ ಸಹ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಒಂದೇ ದಿನ ಹೊಸದಾಗಿ ಐಎಲ್ಐ- 45 ಮಂದಿಗೆ, ಎಸ್ಎಆರ್ಐ -16 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಇನ್ನೂ ಸಂಪರ್ಕವೇ ಪತ್ತೆಯಾಗದ 15 ಮಂದಿಗೆ ಮಹಾಮಾರಿ ಒಕ್ಕರಿಸಿದ್ದು, ಪ್ರಾಥಮಿಕ ಸಂಪರ್ಕ ಹೊಂದಿದ್ದ 11 ಮಂದಿಗೆ ಪಾಸಿಟಿವ್ ಇರುವುದು ಧೃಡಪಟ್ಟಿದೆ. ವಿದೇಶದಿಂದ ಬಂದಿದ್ದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೆಮ್ಮಾರಿಗೆ ಒಂದೇ ದಿನ 5 ಮಂದಿ ಬಲಿಯಾಗಿದ್ದಾರೆ. ಒಂದು ವಾರದ ಬಳಿಕ ಸೋಂಕಿತರ ಸಂಖ್ಯೆ ಎರಡಂಕಿಗೆ ಇಳಿದಿರುವುದು ಸದ್ಯ ಸಮಾಧಾನಕರ ಸಂಗತಿಯಾಗಿದೆ. ದಿನೇ ದಿನೇ ದಕ್ಷಿಣ ಕನ್ನಡ ಭಾಗದಲ್ಲಿ ಕೊರೊನಾ ಹಾವಳಿ ಹೆಚ್ಚುತ್ತಿರುವ ಪರಿಣಾಮ ಬೆಂಗಳೂರಿನ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯನ್ನು 23ನೇ ತಾರೀಕಿನ ವರೆಗೂ ಲಾಕ್ ಡೌನ್ ಮಾಡಲಾಗಿದೆ. ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ.
ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?
1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....








