BJP | ದಲಿತರನ್ನು ಸಿಎಂ ಮಾಡುವುದಿಲ್ಲ ಎಂದು ಕಾಂಗ್ರೆಸ್ ಪಣ ತೊಟ್ಟಿದೆಯೇ?
ಬೆಂಗಳೂರು : ದಲಿತರನ್ನು ಸಿಎಂ ಮಾಡುವುದಿಲ್ಲ ಎಂದು #ದಲಿತವಿರೋಧಿಕಾಂಗ್ರೆಸ್ ಪಣ ತೊಟ್ಟಿದೆಯೇ ಎಂದು ರಾಜ್ಯ ಬಿಜೆಪಿ ಕುಟುಕಿದೆ.
ದಲಿತ ಸಿಎಂ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಗಳನ್ನು ಮಾಡಿದ್ದು, “ಮುಂದೆ ನೀವು ಸಿಎಂ ಆಗಲು ನಾವು ಸಹಕರಿಸುತ್ತೇವೆ” ಎಂದು ಖರ್ಗೆ ಅವರಿಗೆ ಜೆಡಿಎಸ್ ಹೇಳಿದ್ದು ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರಿಗೆ ಬರಸಿಡಿಲು ಬಡಿದಂತಾಗಿದೆ. 2013 ರಲ್ಲಿ ದಲಿತ ನಾಯಕ ಸಿಎಂ ಆಗುವುದನ್ನು ತಪ್ಪಿಸಿದ ಕಾಂಗ್ರೆಸ್ 2023 ಕ್ಕೂ ಅದೇ ತಂತ್ರ ಅನುಸರಿಸುತ್ತಿದೆ. ದಲಿತ ನಾಯಕರೆಂದರೆ ಏಕೆ ಇಷ್ಟು ಅಸಹನೆ ಎಂದು ಕುಟುಕಿದೆ.

ಅಲ್ಲದೇ ದಲಿತ ನಾಯಕ ಖರ್ಗೆ ಅವರ ಮೇಲುಗೈ ಆಗುತ್ತದೆ ಎಂಬ ಭಯದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರು ಹೊಂದಾಣಿಕೆಯ ನಾಟಕ ಮಾಡುತ್ತಿದ್ದಾರೆ. ದಲಿತ ನಾಯಕನೋರ್ವ ಸಿಎಂ ಆಗುತ್ತಾರೆ ಎನ್ನುವ ಭಯ ನಿಮ್ಮಲ್ಲಿ ಒಗ್ಗಟ್ಟಿನ ಮಂತ್ರ ಜಪಿಸುವಂತೆ ಮಾಡಿತೆ?
ನಮ್ಮದು ದಲಿತಪರ ಪಕ್ಷ ಎನ್ನುವ ಕಾಂಗ್ರೆಸ್, ವಾಸ್ತವದಲ್ಲಿ ದಲಿತ ಸಮುದಾಯವನ್ನು ಮೇಲೇರಲು ಬಿಡುವುದೇ ಇಲ್ಲ. ಸಿಎಂ ಆಗಲಿದ್ದ ಪರಮೇಶ್ವರ್ ಅವರನ್ನು ಸೋಲಿಸಿದರು, ನಂತರ ಡಿಸಿಎಂ ಸ್ಥಾನದಿಂದಲೂ ಕಿತ್ತೆಸೆದರು, ಈಗ ಇವರ ದೃಷ್ಟಿ ಖರ್ಗೆ ಮೇಲೆ! ದಲಿತರನ್ನು ಸಿಎಂ ಮಾಡುವುದಿಲ್ಲ ಎಂದು #ದಲಿತವಿರೋಧಿಕಾಂಗ್ರೆಸ್ ಪಣ ತೊಟ್ಟಿದೆಯೇ?
ನಮ್ಮದು ದಲಿತಪರ ಪಕ್ಷ ಎನ್ನುವ ಕಾಂಗ್ರೆಸ್, ವಾಸ್ತವದಲ್ಲಿ ದಲಿತ ಸಮುದಾಯವನ್ನು ಮೇಲೇರಲು ಬಿಡುವುದೇ ಇಲ್ಲ.
ಸಿಎಂ ಆಗಲಿದ್ದ ಪರಮೇಶ್ವರ್ ಅವರನ್ನು ಸೋಲಿಸಿದರು, ನಂತರ ಡಿಸಿಎಂ ಸ್ಥಾನದಿಂದಲೂ ಕಿತ್ತೆಸೆದರು, ಈಗ ಇವರ ದೃಷ್ಟಿ ಖರ್ಗೆ ಮೇಲೆ!
ದಲಿತರನ್ನು ಸಿಎಂ ಮಾಡುವುದಿಲ್ಲ ಎಂದು #ದಲಿತವಿರೋಧಿಕಾಂಗ್ರೆಸ್ ಪಣ ತೊಟ್ಟಿದೆಯೇ?
— BJP Karnataka (@BJP4Karnataka) June 4, 2022
ಅಖಂಡ ಶ್ರೀನಿವಾಸ್ ಮೂರ್ತಿ ಮನೆಯ ಮೇಲೆ ಮತಾಂಧರು ದಾಳಿ ನಡೆಸಿದಾಗ ಕೈ ನಾಯಕರು ಕೈಕಟ್ಟಿ ಕುಳಿತಿದ್ದರು. ಮತಾಂಧರನ್ನು ಓಲೈಸಲು ದಲಿತರ ಮೇಲಿನ ದಾಳಿಯನ್ನೂ ಕಾಂಗ್ರೆಸ್ ಸಮರ್ಥಿಸಿಕೊಳ್ಳುತ್ತದೆ!
ಸಿದ್ದರಾಮಯ್ಯ : 2013 – ಪರಮೇಶ್ವರ್ ಸೋಲಿಗೆ ಪಣ. ಸಿದ್ದರಾಮಯ್ಯ & ಡಿಕೆಶಿ : 2023 – ಖರ್ಗೆ ಕಟ್ಟಿಹಾಕಲು ಪಣ. ಒಬ್ಬ ದಲಿತ ನಾಯಕನನ್ನು ಹಿಮ್ಮೆಟ್ಟಿಸಲು ಎಷ್ಟೊಂದು ಉತ್ಸಾಹ ಎಂದು ವ್ಯಂಗ್ಯವಾಡಿದೆ.








