ಚಿತ್ರದುರ್ಗ : ಹೊಳಲ್ಕೆರೆಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಬಯಲು ರಂಗ ಮಂದಿರದ ಹೆಸರು ಬದಲಾಯಿಸಲು ಮುಂದಾಗಿದ್ದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರಿಗೆ ದಲಿತ ಮುಖಂಡರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಶಾಸಕರಿಗೆ ಮುತ್ತಿಗೆ ಹಾಕಲು ಯತ್ನಿಸಿ ದಲಿತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಹೊಳಲ್ಕೆರೆ ಪಟ್ಟಣದಲ್ಲಿರುವ ಅಂಬೇಡ್ಕರ್ ಬಯಲು ರಂಗ ಮಂದಿರದ ಅಭಿವೃದ್ದಿಗೆ ಎಚ್. ಆಂಜನೇಯ ಸಮಾಜ ಕಲ್ಯಾಣ ಸಚಿವರಾಗಿದ್ದಾಗ 3.20 ಕೋಟಿ ಕೋಟಿ ಹಣ ತಂದು ಕಾಮಗಾರಿಯನ್ನು ಆರಂಭಿಸಿದ್ದರು. ಆದರೆ, ಕಾಮಗಾರಿ ಇನ್ನು ನಡೆಯುತ್ತಿದ್ದ ನೆಲಕ್ಕೆ ಟೈಲ್ಸ್ ಕಾಮಗಾರಿ ಬಾಕಿ ಇದೆ. ಏತನ್ಮಧ್ಯೆ ಹಾಲಿ ಶಾಸಕ ಎಂ.ಚಂದ್ರಪ್ಪ ಮತ್ತೆ ಅದೇ ಅಂಬೇಡ್ಕರ್ ಬಯಲು ರಂಗ ಮಂದಿರಕ್ಕೆ ವಾಲ್ಮೀಕಿ ಬಯಲು ರಂಗ ಎಂದು ಹೆಸರು ಬದಲಿಸಿ 2.20 ಕೋಟಿ ತಂದು ಕಾಮಗಾರಿ ಆರಂಭಿಸಲು ಮುಂದಾಗಿದ್ದರು.
ಇದರ ಮಾಹಿತಿ ಪಡೆದ ಮಾಜಿ ಸಚಿವ ಎಚ್.ಆಂಜನೇಯ ಮತ್ತು ಕಾಂಗ್ರೆಸ್ ದಲಿತ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಅಧಿಕಾರಿಗಳ ನಿರ್ಧಾರಕ್ಕೆ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೆ ಕಾಮಗಾರಿಗೆ ತೆಗೆಯಲಾಗಿದ್ದ ಗುಂಡಿಯನ್ನು ಮುಚ್ಚಿಸಿದ್ದಾರೆ.