ಖ್ಯಾತ ನಟ ದಳಪತಿ ವಿಜಯ್ ರಾಜಕಾರಣಕ್ಕೆ ಧುಮುಕಿದ್ದು, ಅಭಿಮಾನಿಗಳು, ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಶುಭಾಶಯ ತಿಳಿಸುತ್ತಿದ್ದಾರೆ. ಈ ಮಧ್ಯೆ ಸೂಪರ್ ಸ್ಟಾರ್ ರಜನಿಕಾಂತ್(Rajinikanth) ಅವರು ಕೂಡ ಅಭಿನಂದನೆ ಸಲ್ಲಿಸಿದ್ದಾರೆ.
ವಿಜಯ್ ದಳಪತಿ (Vijay Thalapathy) ರಾಜಕೀಯ ರಂಗ ಪ್ರವೇಶಿಸುತ್ತಿದ್ದಂತೆ ತಮಿಳು ರಾಜಕೀಯ ರಂಗದಲ್ಲಿ ಅಲೆಯೇ ಸೃಷ್ಟಿಯಾಗಿದೆ. ಈ ಹಿಂದೆಯೂ ವಿಜಯ್ ರಾಜಕೀಯ ರಂಗ ಪ್ರವೇಶಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ, ಸದ್ಯ ಅದು ನಿಜವಾಗಿದ್ದು, ‘ತಮಿಳಿಗ ವೆಟ್ರಿ ಕಳಗಂ’ (TVK) ಪಕ್ಷ ಸ್ಥಾಪಿಸಿ, ರಾಜಕೀಯ ಅಖಾಡ ಪ್ರವೇಶಿಸಿದ್ದಾರೆ.
ಇತ್ತೀಚೆಗೆ ವಿಜಯ್ ಅವರಿಗೆ ನೀವು ನಿಜ ಜೀವನದಲ್ಲಿ ಸಿಎಂ ಆದರೆ ಏನಾಗುತ್ತದೆ ಎಂದು ಕೇಳಲಾಗಿತ್ತು. ಇದಕ್ಕೆ ಉತ್ತರ ನೀಡಿದ್ದ ವಿಜ್ಯ, ಸಿಎಂ ಆದರೆ ʻನಾನು ಎಂದಿಗೂ ನಟಿಸುವುದಿಲ್ಲ’ ಎಂದು ಹೇಳಿದ್ದರು. ಇದರ ಬೆನ್ನಲ್ಲಿಯೇ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಹೊಸ ಸಂಚಲನ ಸೃಷ್ಟಿಯಾದಂತಾಗಿದೆ. ಸದ್ಯ ವಿಜಯ್ ಪಕ್ಷದ ಕಾರ್ಯಗಳಲ್ಲಿ ಬ್ಯೂಸಿಯಾಗಿದ್ದಾರೆ.