ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದರ್ಭೆ ಅಂದರೆ ಕೇವಲ ಹುಲ್ಲು ಮಾತ್ರನಾ..? ಏನಿದರ ಮಹತ್ವ…

Mahesh M Dhandu by Mahesh M Dhandu
May 21, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ದರ್ಭೆ ಅಂದರೆ ಕೇವಲ ಹುಲ್ಲು ಮಾತ್ರನಾ..? ಏನಿದರ ಮಹತ್ವ…

ಗರುಡ ರಾಜನು ತನ್ನ ಪರಿವಾರವನ್ನು ರಕ್ಷಿಸಿಕೊಳ್ಳಲು ನಾಗ ಕುಲದ ಕುದ್ರುವಿನ ಪರಿವಾರಕ್ಕೆ ಸಹಾಯ ಮಾಡಲು ದೇವಲೋಕಕ್ಕೆ ಹೋಗಿ ಅಮೃತ ಕಲಶವನ್ನು ತರುತ್ತಾನೆ

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಆಗ ಆ ಕಳಶವನ್ನು ದರ್ಭೆ ಮೇಲಿಟ್ಟು ತನ್ನ ಮಕ್ಕಳನ್ನು ಕರೆತರಲು ಹೋಗುತ್ತಾಳೆ ಕದ್ರುವು
ಆಗ ಇಂದ್ರನು ಧಾವಿಸಿ ಬಂದು ಅಮೃತ ಕಲಶವನ್ನು ಅಪಹರಿಸಿ ದೇವಲೋಕಕ್ಕೆ ಒಯ್ದುನು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಹಾಗೆ ಕಳಸವನ್ನು ಒಯ್ಯುತ್ತಿದ್ದಾಗ ಅಮೃತದ ಕೆಲವು ಬಿಂದುಗಳು ತುಳುಕಿ ದರ್ಭೆ ಹುಲ್ಲಿನ ಮೇಲೆ ಬಿದ್ದವು ನಂತರ ಬಂದ ಸರ್ಪಗಳು ದರ್ಭೆಯ ಮೇಲೆ ಬಿದ್ದಿದ್ದ ಅಮೃತ ಬಿಂದುಗಳನ್ನು ನೆಕ್ಕಲು ಹೋಗಿ ತಮ್ಮ ನಾಲಗೆಗಳನ್ನು ಸೀಳಿಕೊಂಡವು .

ಈ ಕಾರಣದಿಂದ ಸರ್ಪಗಳಿಗೆ ಸೀಳಿದ ನಾಲಿಗೆಗಳಾಗಿ ದ್ವಿಜಿಹ (ಎರಡು )ಎಂಬ ಹೆಸರನ್ನು ಪಡೆದವು

ಅಮೃತ ಬಿಂದುಗಳು ತುಳುಕಿ ಈ ರೀತಿ ಧರ್ಭೆಗಳ ಮೇಲೆ ಬಿದ್ದಾಗ ಅವು ಅಮೃತತ್ವವನ್ನು ಪಡೆದು ಪವಿತ್ರಿ ಎಂಬ ಹೆಸರನ್ನು ಪಡೆದು ದರ್ಭೆಗಳು ಒಂದೇ ರೀತಿಯ ಹುಲ್ಲಾಗಿದ್ದು ಅವು ಹಿಂದೂಗಳಿಗೆ ಪರಮ ಪವಿತ್ರವಾಗಿವೆ

ಇವುಗಳಲ್ಲಿ ಅನೇಕ ವಿಧಗಳಿವೆ ದರ್ಭೆ .ಕುಶ. ಕಾಶವೆಂಬ ವಿಶ್ವಾಮಿತ್ರ ದರ್ಭೆ . ಯಮವೆಂಬ ಧ್ಯಾನದ ಎಲೆ. ಭತ್ತದ ಗರಿ .ಜೊಂಡು .ಬಿಳಿ ಕಮಲ ಮುಂತಾದವುಗಳು

ದೇವತಾ ಕಾರ್ಯವಿರಲಿ ಪಿತೃ ಕಾರ್ಯಗಳಲ್ಲಿ ದರ್ಭೆ ಇಲ್ಲದೆ ಮಾಡುವಂತಿಲ್ಲ ಅಲ್ಲದೆ ಈ ಸಂದರ್ಭದಲ್ಲಿ ದರ್ಭೆಯಿಂದ ಮಾಡಿದ ಪವಿತ್ರವನ್ನು ಬಲಗೈ ಉಂಗುರದ ಬೆರಳಿಗೆ ಧರಿಸಬೇಕು

ಗ್ರಹಣ ಕಾಲದಲ್ಲಿ ಸಂಭವಿಸಬಹುದಾದ ದುಷ್ಟ ಪರಿಣಾಮಗಳನ್ನು ತಡೆಯಲು ದರ್ಭೆಗಳನ್ನು ನೀರು ತಿಂಡಿ ತಿನಿಸುಗಳು ಮುಂತಾದವುಗಳ ಮೇಲೆ ಹರಡುತ್ತಾರೆ ದರ್ಬೆಯ ಆಗ್ರದಲ್ಲಿ ಶಿವನು ಮಧ್ಯದಲ್ಲಿ ವಿಷ್ಣುವು ಬುಡದಲ್ಲಿ ಬ್ರಹ್ಮನು ಉಪಸ್ಥಿತರಿರುತ್ತಾರೆ ಎಂದು ನಂಬಲಾಗಿದೆ

ಪೂರ್ವದಲ್ಲಿ ಮಾನವರು ಬಹುವಿಧವಾದ ದಾನಗಳನ್ನು ಮಾಡಿದರು ಆಗ ದೈತ್ಯರು ಈ ದಾನಗಳ ಫಲವನ್ನು ತಾವೇ ಪಡೆದರು ಈ ಬಗ್ಗೆ ಚಿಂತಿಸಿದ ಬ್ರಹ್ಮದೇವನು ಒಂದು ನಿಯಮವನ್ನು ಮಾಡಿದನು

ಇನ್ನು ಮುಂದೆ ದೇವತಾ ಕಾರ್ಯಗಳಲ್ಲಿ ದರ್ಭೆ ಅಕ್ಷತೆ ಮತ್ತು ಜಲವನ್ನು ಉಪಯೋಗಿಸಬೇಕು ಹಾಗೆಯೆ ಪಿತೃ ಕಾರ್ಯಗಳಲ್ಲಿ ದರ್ಭೆ ಅಕ್ಷತೆ ಮತ್ತು ತಿಲಗಳನ್ನು ಬಳಸಬೇಕು

ಇವುಗಳು ಯಜ್ಞಾಂಗಗಳಾಗಿ ಇರುವುದರಿಂದ ದೈತ್ಯರು ಅವುಗಳ ಹತ್ತಿರ ಬರಲಾಗುವುದಿಲ್ಲ ಈ ರೀತಿ ದೇವತಾ ಪಿತೃ ಕಾರ್ಯಗಳನ್ನು ರಕ್ಷಿಸಲು ಪರಮಾತ್ಮನು ದರ್ಬೆ ಮತ್ತು ತಿಲಗಳನ್ನು ಸೃಷ್ಟಿಸಿದನು

ಧರ್ಭೆಗಳ ಸೃಷ್ಟಿಯ ಬಗ್ಗೆ ಪುರಾಣದಲ್ಲಿ ಒಂದು ಕಥೆಯಿದೆ ವಿಷ್ಣುವು ವರಾಹ ಅವತಾರ ತಾಳಿದಾಗ ಅವನು ಒಮ್ಮೆ ಭೂಮಿಯ ಮೇಲೆ ನಿಂತು ಮೈ ಕೆಡವಿದಾಗ ಅವನ ಶರೀರದ ಕೆಲವು ರೋಮಗಳು ಬಿದ್ದು ಧರ್ಭೆಗಳಾದವು ಎಂದು ಹೇಳಲಾಗಿದೆ ರೋಮಗಳು ಬಿದ್ದ ಸ್ಥಳವು ಬಹ್ಮಿಷ್ಮತಿ ( ದರ್ಭೆಗಳ ಪ್ರದೇಶ ) ಎಂದು ಖ್ಯಾತವಾಯಿತು ಅಲ್ಲದೆ ಅದು ಸ್ವಾಯಂಭುವ ಮನುವಿನ ರಾಜಧಾನಿಯಾಗಿತು,
ಈಗ ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ಅನ್ನೋದನ್ನು ನೋಡೋಣ.👇

ದರ್ಭೆಯನ್ನು ವೇದಗಳ ಕಾಲದಿಂದಲೂ ದೇವರ ಆಸನ ಗ್ರಹಣಕ್ಕೆ ಮುನ್ನ ಆ ಜಾಗದಲ್ಲಿ ಇರಿಸಲಾಗುತ್ತಿತ್ತು.ಸ್ವಯಂ ಶ್ರೀ ಕೃಷ್ಣ ಪರಮಾತ್ಮನಿಂದ ಭಗವದ್ಗೀತೆಯಲ್ಲಿ ದರ್ಭೆಯನ್ನು ಧ್ಯಾನಾಸನಗಳ ಭಾಗವಾಗಿದೆ ಎಂದು ಉಪದೇಶಿಸಲಾಗಿದೆ.ಧ್ಯಾನದ ಸಮಯದಲ್ಲಿ ನಮ್ಮ ಶರೀರದಿಂದ ಮುಖ್ಯವಾಗಿ ಕಾಲು ಹಾಗೂ ಕಾಲಿನ ಬೆರಳಿನಂದ ಹೊರಹೋಗುವ ಶಕ್ತಿಯನ್ನು ತಡೆಗಟ್ಟುವುದರಲ್ಲಿ ಇದು ಮುಖ್ಯ ಪಾತ್ರ ವಹಿಸುತ್ತದೆ.‍ಹೋಮ ಹವನಾದಿಗಳಲ್ಲಿ ದರ್ಭೆಯನ್ನು ಹೋಮ ಕುಂಡದ ಸುತ್ತಲೂ 4 ಬದಿಯಲ್ಲೂ ಹಾಕಲಾಗುವುದು ಇದನ್ನು ಪರಿಸ್ಥರಣ ಅನ್ನುತ್ತಾರೆ.
ಅಂದರೆ ಇದು ದೇವರ ಆಸನವಾಗಿದೆ.

ಹಿಂದೆ ಸಮುದ್ರ ಮಥನದ ಸಂದರ್ಭದಲ್ಲಿ ಮಹಾವಿಷ್ಣು ಮಂದರ ಪರ್ವತಕ್ಕೆ ಆಸರೆಯಾಗಲು ಕೂರ್ಮಾವತಾರ ತಾಳಿದಾಗ ಆಮೆಯ ಮೈಯ ಕೆಲವು ರೋಮಗಳು ಮಂಥನದ ಘರ್ಷಣೆಯಿಂದ ಉದುರಿ ಸಮುದ್ರದಲ್ಲಿ ಬೀಳುತ್ತವಂತೆ.ಇವುಗಳೇ ಕ್ರಮೇಣ ಕುಶ ಆಗಿ ಕರೆಯಲ್ಪಡುತ್ತವೆ.

ದರ್ಭೆಯಿಂದ ಮಾಡುವ ಪವಿತ್ರವನ್ನು ಪುರುಷನು ತನ್ನ ಬಲಕೈ ಯ ಉಂಗುರದ ಬೆರಳಿಗೆ ಧರಿಸುತ್ತಾನೆ.ಅಶುಭ ಸಂದರ್ಭಗಳಾದ ಸಾವು ಮೊದಲಾದ ಸಂದರ್ಭಗಳಲ್ಲಿ ಒಂದೇ ಎಳೆಯ ದರ್ಭೆಯನ್ನೂ,ನಿತ್ಯ ಪೂಜೆ ಹಾಗೂ ಶುಭ ಸಂದರ್ಭಗಳಲ್ಲಿ ಎರಡು ಎಳೆಯ ದರ್ಭೆಯನ್ನೂ,ಅಮಾವಾಸ್ಯೆ ಹಾಗೂ ಶ್ರಾದ್ಧ ಕರ್ಮಾದಿಗಳಲ್ಲಿ 3 ಎಳೆಯ ದರ್ಭೆಯನ್ನೂ ಮತ್ತೂ ದೇವಸ್ಥಾನಗಳಲ್ಲಿ ಮಾಡಲಾಗುವ ಪೂಜೆಗಳಲ್ಲಿ 4 ಎಳೆಯ ದರ್ಭೆಯನ್ನೂ ಪವಿತ್ರವಾಗಿ ನಮ್ಮ ಬಲಗೈ ಉಂಗುರದ ಬೆರಳಲ್ಲಿ ಧರಿಸಲಾಗುತ್ತದೆ.
ಮನೆಯಲ್ಲಿ ನಾವು ಮಾಡುವ ಯಾವುದೇ ಕಾರ್ಯಕ್ರಮದ ಮೊದಲಿಗೆ “ಪುಣ್ಯಾಹವಾಚನ”ಎಂಬುದಾಗಿ ಮಾಡುತ್ತಾರೆ;ಅಂದರೆ ಕಾರ್ಯಕ್ರಮ ನಡೆಯುವ ಜಾಗದ ಶುದ್ದೀಕರಣ.ಇಲ್ಲಿ ದರ್ಭೆಯ ಒಂದು ಗೊಂಚಲನ್ನು ಹಿಡಿದು ಅದರ ತುದಿಯಿಂದ ಎಲ್ಲ ಪೂಜಾ ಸಾಮಗ್ರಿಗಳ ಮೇಲೂ,ಆ ಜಾಗದ ಪ್ರತೀ ಮೂಲೆಗಳಲ್ಲೂ,ಹಾಗೂ ಅಲ್ಲಿರುವವರ ಮೇಲೂ ನೀರನ್ನು ಪ್ರೋಕ್ಷಣೆ ಮಾಡಲಾಗುತ್ತದೆ.
ದರ್ಭೆಯ ತುದಿಯಲ್ಲಿ ಧ್ವನಿ ಸಂವೇದನಾ ಕಂಪನಗಳನ್ನುಂಟು ಮಾಡುವ ಶಕ್ತಿಯು ಇದೆ ಎಂದು ಹೇಳಲಾಗುತ್ತದೆ.
ದರ್ಭೆಯಲ್ಲಿರುವ ಕಂಪನಾ ಶಕ್ತಿಯನ್ನು ಪಾತ್ರದಲ್ಲಿರುವ ನೀರು ಹೀರಿಕೊಳ್ಳುತ್ತದೆ.ಈ ನೀರು ಎಲ್ಲೆಲ್ಲಿ ಪ್ರೋಕ್ಷಣೆಯಾಗುತ್ತೋ ಅಲ್ಲಲ್ಲಿ ಶಕ್ತಿಯ ಸಂಚಲನ ಉಂಟಾಗುತ್ತದೆ ಎಂದು ಅದಕ್ಕಾಗಿ ಅನಾದಿ ಕಾಲದಿಂದಲೂ ನಮ್ಮ ಹಿಂದೂ ಧರ್ಮದಲ್ಲಿ ಈ ಸಂಪ್ರದಾಯವು ನಡೆದುಕೊಂಡು ಬರುತ್ತಿದೆ.
ಹೀಗಾಗಿ ತುದಿಗಳಿಲ್ಲದ ದರ್ಭೆಯನ್ನು ಉಪಯೋಗಿಸುವಂತಿಲ್ಲ,
ಯಾಕಂದ್ರೆ ಇದರಲ್ಲಿ ಪ್ರವಹನಾ ಶಕ್ತಿಯು ನಷ್ಟವಾಗಿರುತ್ತದೆ.
ಧಾರ್ಮಿಕ ಪರಂಪರೆಯ ಪ್ರಕಾರ ದರ್ಭೆಯನ್ನು ಎಲ್ಲ ದಿನಗಳಲ್ಲೂ ಕೀಳುವಂತಿಲ್ಲ ಹಾಗೂ ತುಂಡರಿಸುವಂತಿಲ್ಲ.ಇದನ್ನು ಕೇವಲ ಹುಣ್ಣಿಮೆಯ ಮರುದಿನ ಬರುವ ಕೃಷ್ಣ ಪಕ್ಷದ ಪಾಡ್ಯದಂದು ಮಾತ್ರ ಕೀಳಲಾಗುತ್ತದೆ.
ಕೆಲವೊಂದು ಸಂಶೋಧನೆ ಯಿಂದ
ಈ ದರ್ಭೆಯನ್ನು ಅಂಗೈಯಲ್ಲಿಟ್ಟು ‍ಎಕ್ಸ್ ರೇ ಸಹಾಯದೊಂದಿಗೆ ಪರೀಕ್ಷಿಸಿದಾಗ ಇದು ಎಕ್ಸ್ ರೇಯ 60% ಕಿರಣವನ್ನು ಹೀರಿಕೊಳ್ಳುತ್ತದೆ ಎಂದು ತಿಳಿದುಬಂತು.ಇಂತಹ ಪ್ರಭಾವಶಾಲಿ ಎಕ್ಸ್ ರೇ ಕಿರಣಗಳನ್ನೆ ಈ ದರ್ಭೆಯು ಹೀರಿಕೊಳ್ಳುವಾಗ ಪ್ರಕೃತಿಯಲ್ಲಿನ ಕೆಟ್ಟ ನಕಾರತ್ಮಕ ವ್ಯಾಧಿಗ್ರಸ್ಥ ಕಿರಣಗಳನ್ನು ಇವು ಹೀರಲಾರವೆ?
ಅನೇಕ ವರುಷಗಳಿಂದಲೂ ಮನೆಯ ಹಿರಿಯರು ಚಂದ್ರ ಹಾಗೂ ಸೂರ್ಯ ಗ್ರಹಣ ದ ಸಂದರ್ಭದಲ್ಲಿ ಗ್ರಹಣ ದಿಂದ ಬರುವ ಅಲ್ಟ್ರ ವೈಲೆಟ್ ಕಿರಣಗಳಿಂದ ನೀರು ಹಾಗೂ ಆಹಾರ ಸಾಮಾಗ್ರಿಗಳನ್ನುರಕ್ಷಿಸಲು ಇವುಗಳ ಮೇಲೆ ಈ ದರ್ಭೆಯನ್ನು ಇಡುತ್ತಿದ್ದರು.ಇಂದಿಗೂ ಈ ಪ್ರತೀತಿ ಜಾರಿಯಲ್ಲಿದೆ.
ಅಯುರ್ವೇದದಲ್ಲಿ ಇದಕ್ಕೆ ತನ್ನದೇ ಆದ ಮಹತ್ವ ಇದೆ.ಅನೇಕ ಸಂದರ್ಭಗಳಲ್ಲಿ ವಿಶೇಷವಾಗಿ ಭೇದಿ,ಋತುಸ್ರಾವ ಹಾಗೂ ಮೂತ್ರ ಸಂಬಂಧಿ ದೋಷ ಮೊದಲಾದವುಗಳಲ್ಲಿ ಇವು ಚಿಕಿತ್ಸಾತ್ಮಕ ಶಕ್ತಿಯಾಗಿಯೂ ಪರಿಣಮಿಸುತ್ತದೆ.
ಹಿಂದೆ ಭಗವಂತನು ದೇವತೆಗಳಿಗೆ ಹಾಗೂ ಮನುಷ್ಯರಿಗೆ ಮಾಧ್ಯಮವಾಗಿ ಯಜ್ಞವನ್ನು ಸೃಷ್ಟಿಸಿದನು.

ಆದರೆ ಆ ಯಜ್ಞದ ಆಹುತಿ ದೇವತೆಗಳಿಗೆ ತಲುಪುತ್ತಿರಲಿಲ್ಲ.

ಅದರಂತೆ ಮನುಷ್ಯನು ಮಾಡಿದ ಶ್ರಾದ್ಧವೂ ಪಿತೃದೇವತೆಗಳಿಗೆ ತಲುಪುತ್ತಿರಲಿಲ್ಲ. ಯಾಕೆಂದರೆ ಯಜ್ಞವನ್ನು ಹಾಗೂ ಶ್ರಾದ್ಧವನ್ನು ರಾಕ್ಷಸರು ಮುಟ್ಟಿ ಅದನ್ನು ಅಶುಚಿ ಮಾಡುತ್ತಿದ್ದರು. ಆಗ ದೇವತೆಗಳು ಮತ್ತು ಪಿತೃಗಳು ಭಗವಂತನನ್ನು ಪ್ರಾರ್ಥಿಸಲು ಭಗವಂತನು ವರಾಹ ರೂಪಿಯಾಗಿ ಬಂದು ತನ್ನ ರೋಮದಿಂದ ದರ್ಭೆಯನ್ನು ಸೃಷ್ಟಿಸಿ ಅದನ್ನು ಯಜ್ಞ ಹಾಗೂ ಶ್ರಾದ್ಧದ ರಕ್ಷಣೆಗೆ ನೀಡಿದನು. ಅಂದಿನಿಂದ ದರ್ಭೆಯ ಸ್ಪರ್ಶವಾದರೆ ದೈತ್ಯರು ಓಡಿಹೋಗುತ್ತಾರೆ. ಆದ್ದರಿಂದ ದರ್ಭೆಯಿಲ್ಲದೆ ಯಜ್ಞವನ್ನು ಹಾಗೂ ಶ್ರಾದ್ಧವನ್ನು ಮಾಡಲೇ ಬಾರದು.

“ಕುಶಮೂಲೇ ಸ್ಥಿತೋ ಬ್ರಹ್ಮಾ ಕುಶಮಧ್ಯೇ ತು ಕೇಶವಃ
ಕುಶಾಗ್ರೇ ಶಂಕರಂ ವಿದ್ಯಾತ್ ಸರ್ವದೇವಾಃ ಸಮಂತತಃ।। (ದೇವಲ)

ದರ್ಭೆಗಳು ಏಳು ವಿಧವಾಗಿದೆ.

ವಿಶ್ವಾಮಿತ್ರಾಃಕುಶಾಃಕಾಶಾಃದೂರ್ವಾ ವ್ರೀಹಯ ಏವ ಚ
ಬಲ್ವಲಾಶ್ಚ ಯವಾಶ್ಚೈವ ಸಪ್ತದರ್ಭಾಃ ಪ್ರಕೀರ್ತಿತಾಃ।।

ಇದರಲ್ಲಿ ರುದ್ರಸಂಬಂಧ ಹಾಗೂ ಆಭಿಚಾರ ಕೃತ್ಯದಲ್ಲಿ ಕಾಶ ಎಂಬ ದರ್ಭೆಯನ್ನು, ಶ್ರೌತ ಸ್ಮಾರ್ತ ಕರ್ಮಗಳಲ್ಲಿ ಕುಶವನ್ನೂ, ಋಷಿ ಪೂಜಾಗಳಲ್ಲಿ ದೂರ್ವಾವನ್ನೂ, ವೈಷ್ಣವ ಸಂಬಂಧಿ ಕಾರ್ಯದಲ್ಲಿ ವಿಶ್ವಾಮಿತ್ರ ದರ್ಭೆಯನ್ನು ಉಪಯೋಗಿಸಬೇಕೆಂದು ಶಾಸ್ತ್ರವು ತಿಳಿಸುತ್ತದೆ. ‌

“ಕಾಶಂ ತು ರೌದ್ರಂಮಾಖ್ಯಾತಂ ಕುಶಂ ಬ್ರಾಹ್ಮಂ ತಥಾ ಸ್ಮೃತಮ್
ದೂರ್ವಾತ್ವಾರ್ಷಂ ಸಮಾಖ್ಯಾತಂ ವಿಶ್ವಾಮಿತ್ರಂ ತು ವೈಷ್ಣವಮ್ ।। (ಹಾರೀತ)

ಕುಶಂ ತು ಸರ್ವಕಾರ್ಯೇಷು ಪವಿತ್ರಂ ಸ್ಮೃತಮ್

ಎಂಬ ವಾಕ್ಯದಂತೆ ಇದು ಯಾವುದೇ ಇಲ್ಲದಿದ್ದರೆ ಕುಶ ಎಂಬ ದರ್ಭೆಯನ್ನು ಎಲ್ಲಾ ಕಾರ್ಯಗಳಲ್ಲಿಯೂ ಉಪಯೋಗಿಸಬಹುದು.

‌ ದರ್ಭೆಯನ್ನು ಯಾವಾಗ ಆಹರಣ ಮಾಡಬೇಕು ?

“ಮಾಸೇ ನಭಸ್ಯಮಾವಾಸ್ಯಾ ತಸ್ಯಾಂ ದರ್ಭೋಚ್ಚಯೋ ಮತಃ
ಅಯಾತಯಾಮಾಸ್ತೇ ದರ್ಭಾಃ ನಿಯೋಜ್ಯಾಃ ಸ್ಯುಃ ಪುನಃ ಪುನಃ ।।(ಹಾರೀತ)

🍁ಶ್ರಾವಣ ಮಾಸದ ಅಮಾವಾಸ್ಯೆಯಂದು ಕತ್ತರಿಸಿ ತಂದ ದರ್ಭೆಯು ಯಾತಯಾಮವಾಗದೇ ಯಾವತ್ತೂ ಕಾರ್ಯಗಳಿಗೆ ಬಳಸಬಹುದು.

🍁ಬೇರೆ ಅಮಾವಾಸ್ಯೆಯಂದು ತಂದ ದರ್ಭೆಯನ್ನು ಒಂದು ತಿಂಗಳು ಮಾತ್ರ ಬಳಸಬೇಕು.

ಹುಣ್ಣಿಮೆಯಂದು ತಂದ ದರ್ಭೆಯು 15 ದಿನಗಳ ಕಾಲ ಶುದ್ಧ.

ಮಹಾಲಯ ಅಮಾವಾಸ್ಯೆಯಂದು ತಂದ ದರ್ಭೆಯು 6 ತಿಂಗಳು ಶುದ್ಧ.

ಭಾನುವಾರ ತಂದರೆ 1 ವಾರ. ಆಯಾಯ ದಿನ ತಂದರೆ ಆಯಾಯ ದಿನ ಮಾತ್ರ ಶುದ್ಧ. ‌ ಶ್ರಾವಣ ಅಮಾವಾಸ್ಯೆಯಂದು ಕತ್ತರಿಸಿ ತಂದ ದರ್ಭೆಯ ಜೊತೆಗೆ ಉಳಿದದ್ದನ್ನು ಸೇರಿಸಿದರೆ ಎಲ್ಲವೂ ಶುದ್ಧವಾಗಿ ಯಾವಾಗಲೂ ಬಳಸಬಹುದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

darbha grass benefits in kannada saaksha tv
darbha grass benefits in kannada saaksha tv

‌ ದರ್ಭೆಯ ಬಗ್ಗೆ ಇನ್ನೂ ಕೆಲವು ಚಿಂತನೆಗಳು

“ಅಗ್ರಸ್ಥೂಲಂ ಭವೇನ್ನಾರೀ ಮೂಲಸ್ಥೂಲಂ ನಪುಂಸಕಂ
ಮೂಲಾದಗ್ರಸಮಂ ಪುಂಸಾಂ ದರ್ಭಾಣಾಂ ಚೈವ ಲಕ್ಷಣಮ್ ।। “

ಹೀಗೆ ದರ್ಭೆಯಲ್ಲಿ ಸ್ತ್ರೀ, ಪುಂ, ನಪುಂಸಕ ಎಂದು ಮೂರು ವಿಧವಾಗಿದೆ.

ಯಾವ ಯಾವ ಕಾರ್ಯಗಳಿಗೆ ಯಾವ ಯಾವ ದರ್ಭೆಯನ್ನು ಬಳಸಬೇಕು?

ವಿವಾಹೇ ಚೈವ ಪುಂದರ್ಭಾಃ ಸ್ತ್ರೀದರ್ಭಾಃ ಚೈವ ಪುಂಸುವೇ
ಅನ್ಯಕರ್ಮಸು ಷಂಡಾಃಸ್ಯುಃ ದರ್ಭಾಣಾಂ ಚೈವ ಲಕ್ಷಣಮ್ ।।

ವಿವಾಹಾದಿ ಪುರುಷ ಸಂಸ್ಕಾರದಲ್ಲಿ ಪುಂದರ್ಭೆಯನ್ನೂ, ಪುಂಸವನಾದಿ ಸ್ತ್ರೀಸಂಸ್ಕಾರಗಳಲ್ಲಿ ಸ್ತ್ರೀದರ್ಭೆಯನ್ನೂ, ಇತರ ಕರ್ಮಗಳಿಗೆ ನಪುಂಸಕ ದರ್ಭೆಯನ್ನು ಬಳಸಬೇಕು.

ಪ್ರಾದೇಶಮಾತ್ರದ ಎರಡು ದರ್ಭೆಯು ಪವಿತ್ರ ಎನಿಸಿಕೊಳ್ಳುತ್ತದೆ. (ಅನಖಚ್ಛೇದಿತ, ಸಮೌ, ಸಾಗ್ರೌ, ತುಲ್ಯೌ ಪವಿತ್ರಾರ್ಥಂ ಗೃಹೀತ್ವಾ ಎಂದು ಅಗ್ನಿಮುಖದಲ್ಲಿ ಹೇಳಿದ ಪವಿತ್ರ ಇದೇ)

“ವಿಚ್ಛಿನ್ನಾಗ್ರಂ ತೃಣಂ ಪ್ರೋಕ್ತಂ ಅವಿಚ್ಛಿನ್ನಂ ಪವಿತ್ರಕಮ್
ಪ್ರಾದೇಶಮಾತ್ರಂ ದರ್ಭಾಶ್ಚ……….
ಸಂಗ್ರಹಿಸಿದ ಮಾಹಿತಿ….
****

ದರ್ಬೆ ಹುಲ್ಲಿನ ಉಂಗುರದ ಮಹತ್ವ

ಈ ಪವಿತ್ರ ಉಂಗುರ ದರಿಸುವುದು, ಯಾವುದೇ ಪೂಜಾ, ಯಜ್ಞ, ಹೋಮ, ಹವನಗಳಲ್ಲಿ ನಡೆದುಕೊಂಡು ಬಂದ ಒಂದು ಸುಂದರ ಪುರಾತನ ಸಂಪ್ರದಾಯ. ಸಾಮಾನ್ಯವಾಗಿ ಬ್ರಾಹ್ಮಣರು ಮತ್ತು ಶ್ರೀವೈಷ್ಣವರು ನಿರ್ದಿಷ್ಟವಾಗಿ ಮಂಗಳಕರವಾಗಿರಲಿ ಅಥವಾ ಅಶುಭ ಕಾರ್ಯಕ್ರಮಗಳಗಳನ್ನು ನಿರ್ವಹಿಸುವ ವ್ಯಕ್ತಿ ದರ್ಬೆ ಹುಲ್ಲನ್ನು ನಿರ್ದಿಸ್ಟ್ ವಾದ ರೀತಿಯಲ್ಲಿ ಉಂಗುರ ಮಾಡಿ ಬಲ ಕೈಯ ಉಂಗುರ ಬೆರಳಿಗೆ ಹಾಕುತ್ತಾರೆ.

ನಾವು ಯಾವ ವೃತವಾಗಲಿ ಯಜ್ಞ ಯಾಗಾದಿಗಳಾಗಲಿ ಪೂಜಾದಿಗಳಾಗಲಿ ಇದನ್ನು ಆಚರಿಸುವಾಗ ಭಗವಂತನ ಶಕ್ತಿಯ ಜೊತೆಗೆ ದುಷ್ಟ ಶಕ್ತಿಯೂ ಇರುತ್ತವೆ. ಆಗ ನಮ್ಮ ಕೈಯಲ್ಲಿರುವ ದರ್ಭೆಯ ದರ್ಶನ ಮಾತ್ರದಿಂದ ದುಷ್ಟ ಶಕ್ತಿಯು ಅಲ್ಲಿಂದ ಓಡಿ ಹೋಗುತ್ತವೆ. ಇದು ಇಂದ್ರನ ವಜ್ರಾಯುಧವಿದ್ದಂತೆ. ಆದ್ದರಿಂದ ದರ್ಭೆಯನ್ನು ಬಳಸುತ್ತೇವೆ. ಈ ಧರ್ಭೆಯು ದೇವಲೋಕದಿಂದ ಯಜ್ಞ ಯಾಗಾದಿಗಳಿಗೆಂದೆ ಭೂ ಲೋಕಕ್ಕೆ ಭಗವಂತನು ಕಳಿಸಿರುತ್ತಾನೆ.

ಬ್ರಹ್ಮ ದೇವನು ಸೃಷ್ಠಿಯನ್ನು ಮಾಡುವವನು, ವಿಷ್ಣುವು ಸ್ಥಿತಿಕರ್ತನು, ಶಿವನು ಲಯಕರ್ತನು. ಒಮ್ಮೆ ಶಿವನಿಗೆ ತಾನೇ ಎಲ್ಲರಿಗೂ ಮೇಲೆಂದು ಅಹಂಕಾರ ಬಂದಿತು. ಆ ಕಡೆ ಸೃಷ್ಠಿಕರ್ತ ಬ್ರಹ್ಮನಿಗೂ ತಾನೇ ಮೇಲೆಂದು ಅಹಂಕಾರ ಬಂದಾಗ ಇಬ್ಬರ ವಾದ-ವಿವಾದದಲ್ಲಿ ಶಿವನು ಬ್ರಹ್ಮನ ನಾಲ್ಕನೇ ತಲೆಯನ್ನು ತನ್ನ ಕೈಯಿಂದ ಕಿತ್ತು ತೆಗೆದಾಗ ಬ್ರಹ್ಮಹತ್ಯಾದೆ ದೋಷ ಬಂದಿತು ಹಾಗೂ ಜಗತ್ತೂ ದೋಷಯುಕ್ತವಾಯಿತು.

ಯಜ್ಞ-ಯಾಗಾದಿಗಳನ್ನು ಮಾಡುವುದು ಕಠಿಣವಾಯಿತು. ಆಗ ಎಲ್ಲಾ ದೇವತೆಗಳು ಮತ್ತು ಋಷಿಮುನಿಗಳು ಸೇರಿ ಈ ಎಲ್ಲಾ ದೋಷ ನಿವಾರಣೆಗೆ ದರ್ಭೆಯನ್ನು ಭೂಲೋಕಕ್ಕೆ ತರಬೇಕಾಯಿತು ಮತ್ತು ಶಿವನು ತನ್ನ ಹೆಬ್ಬೆರಳು ಮತ್ತು ಉಂಗುರ ಬೆರಳಿನಿಂದ ಬ್ರಹ್ಮನ ಶಿರವನ್ನು ತೆಗೆದುದರಿಂದ ಶುದ್ಧಿಗಾಗಿ ಪೂಜಾ ಅಧಿಕಾರ ಪ್ರಾಪ್ತಿಗಾಗಿ ದರ್ಭೆಯ ಪವಿತ್ರ ಉಂಗುರ ಧರಿಸಬೇಕೆಂದು ನಿಯಮಿಸಲಾಯಿತು. ಇದು ದರ್ಭೆಯ ಮಹತ್ವ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಸಾಮಾನ್ಯ ಎಲ್ಲಾ ಕಾರ್ಯಗಳಲ್ಲಿ ೨ ಅಥವಾ ೪ ದರ್ಭೆಯಿಂದ ಮಾಡಿದ ಪವಿತ್ರವನ್ನು ಯಾಗಾದಿಗಳಲ್ಲಿ ೫ ದರ್ಭೆಯಿಂದ ಮಾಡಿದ ಪವಿತ್ರವನ್ನು ಪಿತೃಕಾರ್ಯಗಳಲ್ಲಿ ೩ ದರ್ಭೆಯಿಂದ ಮಾಡಿದ ಪವಿತ್ರವನ್ನು ಧರಿಸಬೇಕು.

ದರ್ಬೆ ಹುಲ್ಲು ಮೇಲ್ನೋಟಕ್ಕೆ ದರ್ಬೆ ವ್ಯರ್ಥವಾಗಿ ಬೆಳೆಯುವ ಹುಲ್ಲು . ಆದರೆ ವಾತಾವರಣದಲ್ಲಿರುವ ದುಷ್ಟಶಕ್ತಿಯನ್ನು ನಿಯಂತ್ರಿಸುವ ಅಮೋಘ ಶಕ್ತಿ ದರ್ಬೆಗಿದೆ. ಅದಕ್ಕಾಗಿ ಯಜ್ಞ-ಯಾಗದಿಗಳಲ್ಲಿ ದರ್ಬೆಯನ್ನು ಉಂಗುರವಾಗಿ ಧರಿಸುತ್ತಾರೆ ಹಾಗು ದುಷ್ಟ ಶಕ್ತಿ ನಿಯಂತ್ರಕವಾಗಿ ಯಜ್ಞಕುಂಡದ ಸುತ್ತಲೂ ದರ್ಬೆಯನ್ನು ಇಡುತ್ತಾರೆ. darbha grass benefits in kannada

Tags: #Saaksha TVastrology todaydarbe
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram