ಬೆಂಗಳೂರು: ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣ (Renukaswamy Case)ದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ಗೆ ಬಿಗಿ ಭದ್ರತೆ ಒದಗಿಸಲಾಗಿದೆ.
ಈಗ ದರ್ಶನ್ (Challenging Star Darshan) ಬ್ಯಾರಕ್ ನಂ.3 ರ ಭದ್ರತಾ ಕೊಠಡಿಯಲ್ಲಿದ್ದಾರೆ. ದರ್ಶನ್ ಸೆಲ್ ಗೆ ಜೈಲಿನ ಇನ್ಸ್ ಪೆಕ್ಟರ್ ಮತ್ತು ಮೂವರು ಸಿಬ್ಬಂದಿ ಭದ್ರತೆ ನೀಡುತ್ತಿದ್ದಾರೆ. ದರ್ಶನ್ ನೋಡಲು ಜೈಲಿನ ಕೈದಿಗಳು ಬರವ ಸಾಧ್ಯತೆಗಳಿವೆ. ಹೀಗಾಗಿ ಬ್ಯಾರಕ್ 3 ಹತ್ತಿರ ಪೊಲೀಸ್ ಬಂದೋಬರ್ತ್ ಕೈಗೊಳ್ಳಲಾಗಿದೆ.
ಸೋಮವಾರ ದರ್ಶನ್ ಭೇಟಿಗೆ ಬಂದಿದ್ದ ಪತ್ನಿ ಹಾಗೂ ಮಗನ ಜೊತೆ 15 ನಿಮಿಷ ಭೇಟಿಗೆ ಅವಕಾಶ ನೀಡಲಾಗಿತ್ತು. ಆದರೆ, ಈಗ ದರ್ಶನ್ ಭೇಟಿಗೆ ಯಾರಿಗೂ ಅವಕಾಶವಿಲ್ಲ. ದರ್ಶನ್ ಯಾರ ಸಂಪರ್ಕಕ್ಕೂ ಸಿಗದಂತೆ ಜೈಲಾಧಿಕಾರಿಗಳು ಭದ್ರತೆ ವಹಿಸಿದ್ದಾರೆ. ಊಟ, ತಿಂಡಿ ಸಮಯದಲ್ಲಿಯೂ ಜೈಲಿನ ಕೈದಿಗಳು ದರ್ಶನ್ ಬ್ಯಾರಕ್ ಬಳಿ ಬರದಂತೆ ತಡೆ ನೀಡಲಾಗುತ್ತಿದೆ.
ಬ್ಯಾರಕ್ ನಲ್ಲಿ ತಮ್ಮೊಂದಿಗಿದ್ದವರ ಜೊತೆಯೇ ದರ್ಶನ್ ಮಾತನಾಡುತ್ತಿಲ್ಲ. ಮಾನಸಿಕವಾಗಿ ಕುಗ್ಗಿರುವ ನಟ ಭದ್ರತಾ ಕೊಠಡಿಯಲ್ಲಿ ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ.