ನಟ ದರ್ಶನ್ (Darshan) ರೇಣುಕ ಸ್ವಾಮಿ ಕೊಲೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿ ಪೊಲೀಸರ ವಶದಲ್ಲಿದ್ದಾರೆ. ದರ್ಶನ್ ಯಾವುದಕ್ಕೂ ಇಲ್ಲಿಯವರೆಗೂ ಸರಿಯಾಗಿ ಉತ್ತರಿಸಿಲ್ಲ ಎನ್ನಲಾಗಿದೆ. ಈ ಮಧ್ಯೆ ಪೊಲೀಸರು ವಿಚಾರಣೆಯ ಭಾಷೆ ಬದಲಿಸಿದ್ದಕ್ಕೆ ಕಾಲಿಗೆ ಬೀಳಲು ಹೋಗುತ್ತಿದ್ದಾರೆ ಎನ್ನಲಾಗುತ್ತಿದೆ.
ಈಗ ದರ್ಶನ್ ಅವರು ನಿಧಾನವಾಗಿ ಒಂದೊಂದೆ ವಿಷಯವನ್ನು ಬಾಯಿ ಬಿಡುತ್ತಿದ್ದಾರೆ ಎನ್ನಲಾಗಿದೆ. ಮೊದಲ ಐದು ದಿನದ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್ ತುಟಿ ಬಿಚ್ಚಿರಲಿಲ್ಲವಂತೆ. ಆಗ ದರ್ಶನ್ ಪೊಲೀಸರಿಗೆ ಉಡಾಫೆಯಿಂದ ಉತ್ತರ ಕೊಡುತ್ತಿದ್ದರು. ಎರಡನೇ ಬಾರಿ ಕಸ್ಟಡಿಗೆ ಪಡೆದಾಗ ನಟ ದರ್ಶನ್ ಪೇಚಾಟ ಶುರುವಾಗಿದೆ. ಈಗ ‘ಸರ್ ನನ್ನ ಬಿಟ್ಟು ಬಿಡಿ’ ಎಂದು ಪೊಲೀಸರ ಕಾಲಿಗೆ ಬೀಳಲು ಹೋಗಿದ್ದಾರೆ ಎಂದು ವರದಿ ಆಗಿದೆ.
ದರ್ಶನ್ ಗೆ ಸಮಾಜದಲ್ಲಿ ಒಳ್ಳೆಯ ಹೆಸರಿತ್ತು. ಈ ಕಾರಣಕ್ಕೆ ದರ್ಶನ್ ಅವರನ್ನು ಸರಳವಾಗಿ ಪ್ರಶ್ನೆ ಮಾಡುವ ಆಲೋಚನೆ ಪೊಲೀಸರಿಗಿತ್ತು. ಆದರೆ, ದರ್ಶನ್ ಮಾತ್ರ ಉಡಾಫೆಯ ಉತ್ತರ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಭಾಷೆ ಬದಲಾಯಿಸಿದ್ದಾರೆ ಎನ್ನಲಾಗುತ್ತಿದೆ. ಎರಡನೇ ಬಾರಿಗೆ ಕಸ್ಟಡಿಗೆ ಹೋದಾಗ ಪೊಲೀಸ್ ಸ್ಟೈಲ್ ನಲ್ಲಿ ಪ್ರಶ್ನೆ ಮಡಲಾಗಿದೆ. ಸರ್ ನನ್ನ ಬಿಟ್ಟು ಬಿಡಿ ಎಂದು ಪರಿಪರಿಯಾಗಿ ಕೇಳಿಕೊಂಡು ಕಾಲಿಗೆ ಬೀಳಲು ಮುಂದಾಗುತ್ತಿದ್ದಾರೆ ಎನ್ನಲಾಗಿದೆ. ಕೈ ಮುಗಿದು ಕೇಳಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ಇಲ್ಲಿಯವರೆಗೆ ದರ್ಶನ್ ನೋಡಲು ತಾಯಿ, ಹೆಂಡತಿ ಸೇರಿದಂತೆ ಆಪ್ತರು ಬಂದಿಲ್ಲ ಎನ್ನಲಾಗುತ್ತಿದೆ.