ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ದರ್ಶನ್ ಗೆ ಈಗ ಆದಾಯ ತೆರಿಗೆ ಇಲಾಖೆ (Income Tax Department) ಯ ಸಂಕಷ್ಟ ಶುರುವಾಗಿದೆ.
ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿದ್ದ ದರ್ಶನ್ ರಾಜಾತಿಥ್ಯ ಪಡೆಯುತ್ತಿರುವುದು ಬೆಳಕಿಗೆ ಬರುತ್ತಿದ್ದಂತೆ ಬಳ್ಳಾರಿ ಜೈಲಿಗೆ ಸಿಫ್ಟ್ ಮಾಡಲಾಗಿತ್ತು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಸೆ. 23ರಂದು ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮುಂದೂಡಿದೆ.
ಈಗ ಕೊಲೆ ಪ್ರಕರಣದಲ್ಲಿ 70 ಲಕ್ಷ ರೂ. ಸಿಕ್ಕಿರುವ ಕಾರಣ ಐಟಿ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ (Magistrate Court) ಮನವಿ ಸಲ್ಲಿಸಿದ್ದರು. ಬಳ್ಳಾರಿ ಜೈಲಿನಲ್ಲಿರುವ ಕೊಲೆ ಆರೋಪಿ ದರ್ಶನ್ (Darshan) ರನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಅಧಿಕಾರಿಗಳು ಕೋರಿದ್ದರು. ಈಗ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮನವಿಗೆ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಮಂಗಳವಾರ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆ ಇದೆ.








