ಮಂಡ್ಯ: ಜಿಲ್ಲೆಯಲ್ಲಿ ಹೆಮ್ಮಾರಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಸಾವನ್ನಪ್ಪುವವರ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜನ ಗುಂಪು ಸೇರುವುದು, ಪ್ರತಿಭಟನೆ, ಸಭೆ ಸಮಾರಂಭ ನಡೆಸುವುದನ್ನು ತಡೆಯಲು ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.
ಆದರೆ, ಮಂಡ್ಯದಲ್ಲಿ ನಿಷೇಧಾಜ್ಞೆ ಆದೇಶ ಜಾರಿಯಲ್ಲಿದ್ದಾಗಲೇ ನಿಯಮ ಉಲ್ಲಂಘಿಸಿದ್ರೂ ಡೋಂಟ್ ಕೇರ್ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಧಿಕಾರಿ ಆದೇಶ ಜಾರಿ ಮಾಡಿದ ಮರು ದಿನವೇ ಬೃಹತ್ ಪ್ರತಿಭಟನೆ ಮಾಡಿದ್ದರೂ ಯಾರೂ ಕೇಳೋರೆ ಇರಲಿಲ್ಲ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಲಾರಿ ಲಾರಿಗಳಲ್ಲೇ 500ಕ್ಕೂ ಹೆಚ್ಚು ಮಂದಿ ಆಗಮಿಸಿ
ಗುಂಪು ಗುಂಪಾಗಿ ಸೇರಿ, ಸಾಮಾಜಿಕ ಅಂತರ ಮರೆತು ಪ್ರತಿಭಟನೆ ನಡೆಸಿದ್ದರೂ ಯಾರೂ ಕೇಳುವವರೇ ಇಲ್ಲದಂತಾಗಿದೆ.
ಬೋವಿ ಜನಾಂಗದವರು, ಕಾರ್ಮಿಕರು ಡಿಸಿ ಕಚೇರಿ ಹಿಂಭಾಗವೇ ಪ್ರತಿಭಟನೆ ನಡೆಸಿದರೂ ಪೆÇಲೀಸರು ಕ್ಯಾರೇ ಎಂದಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್ನಲ್ಲಿ ಆರ್ಸಿಬಿ ವಾದ
ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...








