ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

DC vs SRH Match | ಗೆಲುವಿಗಾಗಿ ಡೆಲ್ಲಿ – ಹೈದರಾಬಾದ್ ಹೋರಾಟ

Mahesh M Dhandu by Mahesh M Dhandu
May 5, 2022
in Newsbeat, Sports, ಕ್ರಿಕೆಟ್
IPl 2022 srh-vs-dc-match-Head to Head Records saaksha tv

IPl 2022 srh-vs-dc-match-Head to Head Records saaksha tv

Share on FacebookShare on TwitterShare on WhatsappShare on Telegram

DC vs SRH Match | ಗೆಲುವಿಗಾಗಿ ಡೆಲ್ಲಿ – ಹೈದರಾಬಾದ್ ಹೋರಾಟ

ಇಂಡಿಯನ್ ಪ್ರಿಮಿಯರ್ ಲೀಗ್ ನ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಇಂದಿನ ಪಂದ್ಯ ನಡೆಯಲಿದ್ದು, ಗೆಲುವಿಗಾಗಿ ಉಭಯ ತಂಡಗಳು ಗುದ್ದಾಟ ನಡೆಸಲಿವೆ.

ರಿಷತ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸದ್ಯ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಕೇನ್ ವಿಲಿಯಂ ಸನ್ ಸಾರಥ್ಯದ ಸನ್ ರೈಸರ್ಸ್ ಹೈದರಾಬಾದ್ ತಂಡ ಐದನೇ ಸ್ಥಾನದಲ್ಲಿದೆ.

ಈ ಸೀಸನ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಒಂಭತ್ತು ಪಂದ್ಯಗಳನ್ನಾಡಿದ್ದು, ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಇನ್ನುಳಿದ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ರೆ ಡೆಲ್ಲಿಗೆ ಪ್ಲೇ ಆಫ್ಸ್ ಚಾನ್ಸ್ ಇದೆ. ಈ ಕಾರಣಕ್ಕಾಗಿ ಡೆಲ್ಲಿ ಗೆಲುವಿಗಾಗಿ ಹೋರಾಟ ನಡೆಸಲಿದೆ.

ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡ ಒಂಭತ್ತು ಪಂದ್ಯಗಳನ್ನಾಡಿದ್ದು, ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಪ್ಲೇ ಆಫ್ಸ್ ದೃಷ್ಠಿಯಿಂದ ಹೈದರಾಬಾದ್ ತಂಡಕ್ಕೂ ಗೆಲುವು ಅನಿವಾರ್ಯವಾಗಿದೆ.

ಅಂದಹಾಗೆ ಕಳೆದ ಪಂದ್ಯದಗಳಲ್ಲಿ ಡೆಲ್ಲಿ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ಡೆಲ್ಲಿ ತಂಡ ಆರು ರನ್ ಗಳಿಂದ ಸೋಲು ಕಂಡಿದೆ.  

ಡೆಲ್ಲಿ ಪರ ಅಕ್ಷರ್ ಪಟೇಲ್ 42 ರನ್ , ಪಂತ್ 44 ರನ್ ಗಳಿಸಿದ್ದರು. ಅದೇ ರೀತಿ ಹೈದರಾಬಾದ್ ತಂಡ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೋರಾಟ ನಡೆಸಿತ್ತು.

ಈ ವೇಳೆ ಎಸ್ ಆರ್ ಹೆಚ್ 13 ರನ್ ಗಳಿಂದ ಸೋಲು ಕಂಡಿತ್ತು. ಕೇನ್ ವಿಲಿಯಂ ಸನ್ 47 ಮತ್ತು ಪೂರನ್ 64 ರನ್ ಗಳಿಸಿದ್ದರು.

dc-vs-srh-match-srh vs dc prediction who will win saaksha tv

ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಬ್ಯಾಟಿಂಗ್, ಬೌಲಿಂಗ್ ನಲ್ಲಿ ಮ್ಯಾಚ್ ವಿನ್ನರ್ ಗಳಿದ್ದರೂ ಅದೃಷ್ಠ ಕೈ ಕೊಡುತ್ತಿದೆ. ಆಟಗಾರರು ಸಾಂಘಿಕ ಹೋರಾಟ ನಡೆಸುವಲ್ಲಿ ವಿಫಲರಾಗುತ್ತಿದ್ದಾರೆ.

ಆರಂಭಿಕರಾಗಿ ಬರುವ ಡೆವಿಡ್ ವಾರ್ನರ್, ಪೃಥ್ವಿ ಶಾ ತಂಡಕ್ಕೆ ಉತ್ತಮ ಆರಂಭ ನೀಡಬೇಕಿದೆ. ವಾರ್ನರ್ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದರೂ ಪೃಥ್ವಿ ಶಾ ಅಸ್ಥಿರ ಆಟ ಮುಂದುವರೆದಿದೆ.

ಮಿಚೆಲ್ ಮಾರ್ಷ್ ಆಗಮನದಿಂದಾಗಿ ಮಿಡಲ್ ಆರ್ಡರ್ ಸಮಸ್ಯೆ ಬಗೆಹರಿದಿದೆ. ರಿಷಬ್ ಪಂತ್ ಬ್ಯಾಟ್ ನಿಂದ ರನ್ ಗಳು ಬರುತ್ತಿರೋದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ.

ಲಲತ್ ಯಾದವ್ ಕೂಡ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡುತ್ತಿದ್ದಾರೆ. ರೋವ್ ಮನ್ ಪೊವೆಲ್, ಅಕ್ಷರ್ ಪಟೇಲ್, ಶರ್ದೂಲ್ ಠಾಕೂರ್ ಬ್ಯಾಟಿಂಗ್ ನಲ್ಲಿ ಒಳ್ಳೆ ಟಚ್ ನಲ್ಲಿದ್ದಾರೆ.

ಇನ್ನು ಬೌಲಿಂಗ್ ವಿಚಾರಕ್ಕೆ ಬಂದರೇ ಕುಲ್ ದೀಪ್ ಯಾದವ್ ತಂಡದ ವಿಕೆಟ್ ಟೇಕಿಂಗ್ ಬೌಲರ್ ಆಗಿದ್ದಾರೆ. ಜೊತೆಗೆ ಶರ್ದೂಲ್ ಠಾಕೂರ್ ಮಿಡಲ್ ಓವರ್ ಗಳಲ್ಲಿ ವಿಕೆಟ್ ಪಡೆಯುತ್ತಿರೋದು ತಂಡಕ್ಕೆ ಕೂಡಿ ಬರುತ್ತಿದೆ.

ಇನ್ನು ಪವರ್ ಪ್ಲೇ ನಲ್ಲಿ ಮುಸ್ತಫಿಜುರ್ ರೆಹಮಾನ್, ಚೇತನ್ ಸಕಾರಿಯಾ ಉತ್ತವಾಗಿ ದಾಳಿ ನಡೆಸುತ್ತಿದ್ದಾರೆ.

ಸನ್ ರೈಸರ್ಸ್ ಹೈದರಾಬಾದ್ ವಿಚಾರಕ್ಕೆ ಇಂಚೂರಿ ಸಮಸ್ಯೆ ಕಾಡುತ್ತಿದೆ. ಆಲ್ ರೌಂಡರ್ ವಾಷಿಂಗ್ ಟನ್ ಸುಂದರ್ ಇಂದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಗಳಿವೆ.

ಹಾಗೆ ಯಾರ್ಕರ್ ಕಿಂಗ್ ಟಿ ನಟರಾಜನ್ ಕೂಡ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಇಬ್ಬರು ಇಂದಿನ ಪಂದ್ಯವನ್ನು ಮಿಸ್ ಮಾಡಿಕೊಳ್ಳುವ ಸಾಧ್ಯತೆಗಳಿವೆ.

ಇದು ಹೊರತು ಪಡಿಸಿದರೇ ತಂಡಕ್ಕೆ ಸಾಂಘಿಕ ಆಟವೇ ಆಸ್ತಿಯಾಗಿದೆ. ಕೇನ್ ವಿಲಿಯಂ ಸನ್, ಅಭಿಷೇಕ್ ಶರ್ಮಾ ಆರಂಭಿಕರಾಗಿ ಮಿಂಚುತ್ತಿದ್ದಾರೆ.

ಕೇನ್ ಶಾಂತವಾಗಿ ಇನ್ನಿಂಗ್ಸ್ ಕಟ್ಟಿದರೇ ಅಭಿಷೇಕ್ ರನ್ ರೇಟ್ ಕಡಿಮೆಯಾಗದಂತೆ ನೋಡಿಕೊಳ್ಳುತ್ತಾರೆ. ಮಿಡಲ್ ಆರ್ಡರ್ ನಲ್ಲಿ ರಾಹುಲ್ ತ್ರಿಪಾಠಿ, ಐಡನ್ ಮಾರ್ಕ್ರಾಂ, ನಿಕೋಲಸ್ ಪೂರನ್ ಅದ್ಭುತ ಫಾರ್ಮ್ ನಲ್ಲಿದ್ದು, ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಶಶಾಂಕ್ ಸಿಂಗ್ ಕೊನೆಯ ಓವರ್ ಗಳಲ್ಲಿ ಅಬ್ಬರಿಸುತ್ತಿದ್ದಾರೆ.

ಬೌಲಿಂಗ್ ನಲ್ಲಿ ತಂಡಕ್ಕೆ ಯಾವುದೇ ಸಮಸ್ಯೆ ಇಲ್ಲ. ಭುವನೇಶ್ವರ್ ಕುಮಾರ್, ಮಾರ್ಕೋ ಜಾನ್ಸೆನ್, ನಟರಾಜನ್, ಉಮ್ರಾನ್ ಮಲ್ಲಿಕ್ ವಿಕೆಟ್ ಬೇಟೆಯಾಡುತ್ತಿರುವುದು ಪಂದ್ಯದ ಗೆಲುವಿಗೆ ಕಾರಣವಾಗಿದೆ.

dc-vs-srh-match-srh vs dc prediction who will win

       

Tags: #Saaksha TVDC vs SRH Matchipl 2022srh
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram