ಬೆಂಗಳೂರು : ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರಿಗೆ ಕೋವಿಡ್-19 ಸೋಂಕು ಇರುವುದು ದೃಢವಾಗಿದೆ. ಅವರು ಮನೆಯಲ್ಲೇ ಪ್ರತ್ಯೇಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಅವರೇ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದು, ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ.
ಈ ವೇಳೆ ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ.
https://twitter.com/drashwathcn/status/1307251065658552320?s=20
ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಹೊಸ ಸುದ್ದಿಗಳನ್ನು ಇಲ್ಲಿ ಓದಿ
ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದಿದ್ದಾರೆ.








