ಕೋಲಾರ : ಕೊಳೆತ ಸ್ಥಿತಿಯಲ್ಲಿ ತಂದೆ ಹಾಗೂ ಮಗನ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಇತ್ತೀಚೆಗಷ್ಟೇ ತಾಯಿ ಸಾವನ್ನಪ್ಪಿದ್ದು, ಮಗ ಮಾನಸಿಕವಾಗಿ ಕೊರಗಿದ್ದಲ್ಲದೆ ಹೃದಯಾಘಾತದಿಂದ ಪ್ರಾಣ ಚೆಲ್ಲಿದ್ದಾನೆ ಎನ್ನಲಾಗಿದೆ. ಹೀಗಾಗಿ ಆರೈಕೆ ಮಾಡುವವರು ಇಲ್ಲದೆ ತಂದೆ ಕೂಡ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. 12 ದಿನಗಳ ಹಿಂದೆಯೇ ಮಗನಿಗೆ ಹೃದಯಾಘಾತವಾಗಿ ಸಾವನ್ನಪ್ದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿಯೇ ಔಷಧಿ ಹಾಗೂ ಊಟ ನೀಡುವವರು ಇಲ್ಲದೆ, ತಂದೆ ಕೂಡ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಜಿಲ್ಲೆಯ ಬಂಗಾರಪೇಟೆ (Bangarapet) ತಾಲೂಕಿನ ಎಂವಿ ನಗರದಲ್ಲಿ ಕಳೆದ 12 ದಿನಗಳ ಹಿಂದೆಯೇ ಇಬ್ಬರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವಸಂತರಾಜುಲು (84) ಹಾಗೂ ಸೂರ್ಯ ಪ್ರಕಾಶ್ (40) ಮೃತಪಟ್ಟಿರುವ ತಂದೆ-ಮಗ. ಕಳೆದ 12 ದಿನಗಳ ಹಿಂದೆಯೇ ಇಬ್ಬರು ಮೃತಪಟ್ಟಿರುವ ಶಂಕೆ ಮೂಡಿದೆ. ಮೃತ ವಸಂತರಾಜುಲು ಅವರಿಗೆ ಓರ್ವ ಮಗಳಿದ್ದು, ಆಮೆರಿಕದಲ್ಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಪಕ್ಕದ ಮನೆಯವರು ನೀಡಿದ ದೂರಿನ ಅನ್ವಯ ಬಂಗಾರಪೇಟೆ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ