ನಂಜನಗೂಡಿನ ಕಡಬೂರಿನಲ್ಲಿ ಎರಡು ಚಿರತೆಗಳ ಸಾವು
ಮೈಸೂರು : ಜಿಲ್ಲೆಯ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ಎರಡು ಚಿರತೆಗಳು ಶವವಾಗಿ ಪತ್ತೆಯಾಗಿವೆ.
ಗ್ರಾಮದ ರಾಮನಾಯಕ ಎಂಬುವರ ಶುಂಠಿ ಬೆಳೆ ಜಮೀನು ಮತ್ತು ಬಾಳೆ ತೋಟದಲ್ಲಿ, 5 ವರ್ಷದ ಹೆಣ್ಣು ಚಿರತೆ ಮತ್ತು 1 ವರ್ಷದ ಮರಿ ಶವವಾಗಿ ಪತ್ತೆಯಾಗಿದೆ.
ವಿಷ ತಿಂದು ಸಾವನ್ನಪ್ಪಿವೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡಿನ ಅರಣ್ಯ ಇಲಾಖೆ ಅಧಿಕಾರಿ ರಕ್ಷಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶ್ವಾನ ದಳದ ಸಿಬ್ಬಂದಿಯಿಂದ ಕಿಡಿಗೇಡಿಗಳ ಹೆಜ್ಜೆ ಗುರುತು ಪತ್ತೆ ಪ್ರಯತ್ನ ನಡೆದಿದೆ.
ಅಲ್ಲದೇ, ಕಳೆದ 15 ದಿನಗಳ ಹಿಂದೆ ಮೈಸೂರು ತಾಲೂಕಿನ ಇಲವಾಲದಲ್ಲಿ ಮೂರು ಚಿರತೆಗಳು ಅನುಮಾನಾಸ್ಪಾದವಾಗಿ ಮೃತಪಟ್ಟಿದ್ದವು.