ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಲಾಕ್ ಡೌನ್ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸರ್ಕಾರವೇ ತೀರ್ಮಾನಿಸುತ್ತದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

admin by admin
May 31, 2021
in Newsbeat, State, ರಾಜ್ಯ
dr sudhakar saakshatv
Share on FacebookShare on TwitterShare on WhatsappShare on Telegram

ಲಾಕ್ ಡೌನ್ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಸರ್ಕಾರವೇ ತೀರ್ಮಾನಿಸುತ್ತದೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆಗೆ 12,354 ವೈದ್ಯ ವಿದ್ಯಾರ್ಥಿಗಳ ನಿಯೋಜನೆ, ಮನೆ ಆರೈಕೆ ಕರೆಗೆ 5,737 ವಿದ್ಯಾರ್ಥಿಗಳ ನಿಯೋಜನೆ

Related posts

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

January 24, 2026
ರಾಜ್ಯ ಸರ್ಕಾರದಿಂದ ಐತಿಹಾಸಿಕ ತೀರ್ಮಾನ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಬೆಂಗಳೂರಿನಲ್ಲಿ ಭೂಮಿ ಮಂಜೂರು

ರಾಜ್ಯ ಸರ್ಕಾರದಿಂದ ಐತಿಹಾಸಿಕ ತೀರ್ಮಾನ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಬೆಂಗಳೂರಿನಲ್ಲಿ ಭೂಮಿ ಮಂಜೂರು

January 24, 2026

ಬೆಂಗಳೂರು, – ಲಾಕ್ ಡೌನ್ ಕುರಿತು ರಾಜ್ಯ ಸರ್ಕಾರ ವೈಜ್ಞಾನಿಕ ನೆಲೆಗಟ್ಟಿನಲ್ಲಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಈ ಕುರಿತು ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಗಾರರೊಂದಿಗೆ ಮಾತನಾಡಿದ ಸಚಿವರು, ಜನಪ್ರತಿನಿಧಿಗಳು ಜನರ ಜೀವನವನ್ನು ಬಹಳ ಹತ್ತಿರದಿಂದ ನೋಡುತ್ತಾರೆ. ಜನರ ಭಾವನೆಗಳಿಗೆ ಸ್ಪಂದಿಸಲು ಕೆಲ ಜನಪ್ರತಿನಿಧಿಗಳು ಲಾಕ್ ಡೌನ್ ಬಗ್ಗೆ ಹೇಳಿಕೆ ನೀಡಬಹುದು. ಆದರೆ ಸರ್ಕಾರವು ವೈಜ್ಞಾನಿಕ ನೆಲೆಗಟ್ಟಿನಲ್ಲೇ ಲಾಕ್ ಡೌನ್ ಕುರಿತು ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದರು.

ಲಾಕ್ ಡೌನ್ ಗೆ ಸಂಬಂಧಿಸಿದಂತೆ ತಜ್ಞರು ವರದಿ ಸಲ್ಲಿಸಲಿದ್ದಾರೆ. ಇದನ್ನು ಮುಖ್ಯಮಂತ್ರಿಗಳಿಗೆ ನೀಡಿ ಚರ್ಚಿಸಲಾಗುವುದು. ನಂತರ ಮುಖ್ಯಮಂತ್ರಿಗಳು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಲಾಕ್ ಡೌನ್ ಎನ್ನುವುದು ವೈದ್ಯಕೀಯ ಸಂಗತಿ. ಪ್ರಕರಣಗಳ ಸಂಖ್ಯೆ ಹೆಚ್ಚಾದಾಗ ಎಷ್ಟೆಲ್ಲ ಸಾವು ನೋವುಗಳಾಗಿದೆ ಎಂಬುದನ್ನು ಅರಿಯಬೇಕು. ಇದು ಸಾಂಕ್ರಾಮಿಕವಾಗಿರುವುದರಿಂದ ಬಹಳ ಎಚ್ಚರಿಕೆ ಬೇಕು. ಲಾಕ್ ಡೌನ್ ಅನ್ನು ತಾಂತ್ರಿಕವಾಗಿ ಅರ್ಥ ಮಾಡಿಕೊಳ್ಳದೆ, ವೈದ್ಯಕೀಯ ವಲಯದ ಪರಿಣತರ ಅಭಿಪ್ರಾಯ ಪಡೆಯದೆ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ ಎಂದರು.

dr sudhakar bengaluru saakshatvಕೋವಿಡ್ ಸಂಬಂಧಿ ಕಾರ್ಯನಿರ್ವಹಿಸುವವರಿಗೆ ರಿಸ್ಕ್ ಭತ್ಯೆ ನೀಡಲಾಗುತ್ತಿದೆ. ಯಾವುದೇ ಸಿಬ್ಬಂದಿ ಕೋವಿಡ್ ಸಂಬಂಧಿ ಕೆಲಸ ಮಾಡಿ ಭತ್ಯೆ ನೀಡಿಲ್ಲವೆಂದರೆ ಪರಾಮರ್ಶಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ರಾಜಕೀಯದ ಬಗ್ಗೆ ಮಾತನಾಡುವುದೇ ಅಪ್ರಸ್ತುತ. ಮುಖ್ಯಮಂತ್ರಿ ಕುರ್ಚಿ ಖಾಲಿಯೇ ಇಲ್ಲದಿರುವಾಗ ಆ ಬಗ್ಗೆ ಮಾತನಾಡುವುದೇ ಅಸಂಬದ್ಧ ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಿಬ್ಬಂದಿ ನಿಯೋಜನೆ

ಬೆಂಗಳೂರಿನಲ್ಲಿ ಕೊರೊನಾ ನಿರ್ವಹಣೆಗೆ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅಗತ್ಯ ಮಾನವ ಸಂಪನ್ಮೂಲವನ್ನು ಒದಗಿಸಿದ್ದು, ಇದರಿಂದಾಗಿ ಕೊರೊನಾ ನಿರ್ವಹಣೆಗೆ ಚುರುಕು ದೊರೆತಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 12,354 ಮೆಡಿಕಲ್, ದಂತವೈದ್ಯ, ಆಯುಷ್ ವಿದ್ಯಾರ್ಥಿಗಳಿಗೆ ಹೋಮ್ ಐಸೋಲೇಶನ್ ಗಾಗಿ ತರಬೇತಿ ನೀಡಿ ನಿಯೋಜಿಸಲಾಗಿದೆ. ಕೋವಿಡ್ ಕೇರ್ ಕೇಂದ್ರಗಳಲ್ಲಿ 250 ಆಯುಷ್ ಹಾಗೂ ಅಲೋಪಥಿ ವೈದ್ಯರು, ಶುಶ್ರೂಷಕರನ್ನು ನಿಯೋಜಿಸಲಾಗಿದೆ. ಟ್ರಯಾಜಿಂಗ್ ಕೇಂದ್ರಗಳಲ್ಲಿ 300 ಇಂಟರ್ನಿಗಳು, 300 ಶುಶ್ರೂಷಕರನ್ನು ನೇಮಿಸಲಾಗಿದೆ. ಹೋಮ್ ಐಸೋಲೇಶನ್ ಗಾಗಿ 5,737 ವೈದ್ಯ ವಿದ್ಯಾರ್ಥಿಗಳನ್ನು ನಿಯೋಜಿಸಿದ್ದು, ಇವರು 1,456 ದೂರವಾಣಿ ಕರೆಗಳನ್ನು ಮಾಡಿ ನಿರ್ವಹಿಸಿದ್ದಾರೆ. 241 ವೈದ್ಯರು ಹಾಗೂ ತಜ್ಞರು 1,428 ದೂರವಾಣಿ ಕರೆ ಮಾಡಿ, ರೋಗಿಗಳ ಆರೋಗ್ಯ ತಪಾಸಣೆ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ 40 ನರ್ಸಿಂಗ್ ವಿದ್ಯಾರ್ಥಿಗಳು, ಚಿಕ್ಕಬಳ್ಳಾಪುರದಲ್ಲಿ 10 ಇಂಟರ್ನಿಗಳು ಈ ಕಾರ್ಯನಿರ್ವಹಿಸುತ್ತಿದ್ದಾರೆ.

Tags: #cmbsy#saakshatvbengaluruCovid managementCovid19covidindiacovidkarnatakaDr. Sudhakarhealth minister dr.sudhakarkarnatakagovt
ShareTweetSendShare
Join us on:

Related Posts

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

by Shwetha
January 24, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಅಬ್ಬರಕ್ಕೆ ಸಿಲುಕಿ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತದ ಭೀತಿ ಎದುರಾಗಿರುವಾಗಲೇ, ಭಾರತದ ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್...

ರಾಜ್ಯ ಸರ್ಕಾರದಿಂದ ಐತಿಹಾಸಿಕ ತೀರ್ಮಾನ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಬೆಂಗಳೂರಿನಲ್ಲಿ ಭೂಮಿ ಮಂಜೂರು

ರಾಜ್ಯ ಸರ್ಕಾರದಿಂದ ಐತಿಹಾಸಿಕ ತೀರ್ಮಾನ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಬೆಂಗಳೂರಿನಲ್ಲಿ ಭೂಮಿ ಮಂಜೂರು

by Shwetha
January 24, 2026
0

ಬೆಂಗಳೂರು: ರಾಜ್ಯದ ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳ ಸಬಲೀಕರಣದ ದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ಮತ್ತು ಐತಿಹಾಸಿಕ ನಿರ್ಧಾರವೊಂದನ್ನು ಕೈಗೊಂಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಮತ್ತೆ ಟ್ರೆಂಡ್ ಆಯ್ತು #GoBackModi: ದಕ್ಷಿಣ ಭಾರತ ಪ್ರವಾಸದ ವೇಳೆ ಆನ್‌ಲೈನ್ ವಿರೋಧ

ಮತ್ತೆ ಟ್ರೆಂಡ್ ಆಯ್ತು #GoBackModi: ದಕ್ಷಿಣ ಭಾರತ ಪ್ರವಾಸದ ವೇಳೆ ಆನ್‌ಲೈನ್ ವಿರೋಧ

by Shwetha
January 24, 2026
0

ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಭಾರತದ ರಾಜ್ಯಗಳ ಪ್ರವಾಸ ಕೈಗೊಂಡಿರುವ ಬೆನ್ನಲ್ಲೇ ಸಾಮಾಜಿಕ ಜಾಲತಾಣ X ನಲ್ಲಿ #GoBackModi ಹ್ಯಾಶ್‌ಟ್ಯಾಗ್ ಮತ್ತೆ ಭಾರೀ ಪ್ರಮಾಣದಲ್ಲಿ ಟ್ರೆಂಡಿಂಗ್...

ದಾವೋಸ್ ನಲ್ಲಿ ಭಾರತದ ಆರ್ಥಿಕತೆಗೆ ಜೈ ಎಂದ ಡಿಕೆಶಿ: ರಾಹುಲ್ ಗಾಂಧಿಗೆ ಮುಜುಗರ, ಬಿಜೆಪಿಗೆ ಸಂಭ್ರಮ

ದಾವೋಸ್ ನಲ್ಲಿ ಭಾರತದ ಆರ್ಥಿಕತೆಗೆ ಜೈ ಎಂದ ಡಿಕೆಶಿ: ರಾಹುಲ್ ಗಾಂಧಿಗೆ ಮುಜುಗರ, ಬಿಜೆಪಿಗೆ ಸಂಭ್ರಮ

by Shwetha
January 24, 2026
0

ಸ್ವಿಟ್ಜರ್ಲೆಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ (World Economic Forum) ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಡಿರುವ ಮಾತುಗಳು ಈಗ ರಾಷ್ಟ್ರ ರಾಜಕಾರಣದಲ್ಲಿ...

ಸುಷ್ಮಾ ಸ್ವರಾಜ್ ಪಾದ ಪೂಜೆ ಮಾಡಿ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಅಮಿತ್ ಶಾ ಉಗಿದಿದ್ದು ಮರೆತಂತಿದೆ: ಬಿ.ಕೆ.ಹರಿಪ್ರಸಾದ್ ಆಕ್ರೋಶ

ಸುಷ್ಮಾ ಸ್ವರಾಜ್ ಪಾದ ಪೂಜೆ ಮಾಡಿ ಲಾಭ ಗಿಟ್ಟಿಸಿಕೊಂಡ ರೆಡ್ಡಿಗೆ ಅಮಿತ್ ಶಾ ಉಗಿದಿದ್ದು ಮರೆತಂತಿದೆ: ಬಿ.ಕೆ.ಹರಿಪ್ರಸಾದ್ ಆಕ್ರೋಶ

by Shwetha
January 24, 2026
0

ಬೆಂಗಳೂರು: ಗಣಿ ಉದ್ಯಮಿ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದು, ರೆಡ್ಡಿಯವರ ರಾಜಕೀಯ ಜೀವನ,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram