ಜೂನ್ 5, 6 ರ ಬಳಿಕ ಲಾಕ್ ಡೌನ್ ಬಗ್ಗೆ ನಿರ್ಧಾರ : ಯಡಿಯೂರಪ್ಪ
ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಿ ಎಂದು ತಜ್ಞರು ಯಾವುದೇ ವರದಿ ಕೊಟ್ಟಿಲ್ಲ.
ಪರಿಸ್ಥಿತಿ ನೋಡಿಕೊಂಡು ಜೂನ್ 5, 6 ರ ಬಳಿಕ ಲಾಕ್ ಡೌನ್ ವಿಸ್ತರಣೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಕುರಿತಂತೆ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳುತ್ತೇವೆ.
ಜೂನ್ 5, 6 ರ ವೇಳೆಗೆ ಪರಿಸ್ಥಿತಿ ನೋಡಿಕೊಂಡು, ತಜ್ಞರ ಜತೆ, ಸಚಿವರ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ. ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಜಾಸ್ತಿ ಇದೆ.
ಅಲ್ಲದೆ ಲಾಕ್ಡೌನ್ ವಿಸ್ತರಣೆ ಮಾಡಿ ಅಂತ ತಜ್ಞರು ಸದ್ಯ ಯಾವುದೇ ವರದಿ ಕೊಟ್ಟಿಲ್ಲ. ಹೀಗಾಗಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮಾಹಿತಿ ನೀಡಿದರು.
ಇನ್ನು ಕೇಂದ್ರ ಸರ್ಕಾರ ಕೂಡ ಆಯಾ ರಾಜ್ಯಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲು ಸೂಚಿಸಿದೆ. ಹೀಗಾಗಿ ನಾವು ಸಹ ಇಲ್ಲಿನ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸುತ್ತೇವೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.