ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಸೋಲು | ಕಾರ್ಯಕರ್ತರ ಪ್ರತಿಭಟನೆ – Saaksha Tv
ನವದೆಹಲಿ: ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಸೋಲು ಕಂಡ ಬೆನ್ನಲ್ಲೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದೆಹಲಿಯ ಪ್ರಧಾನ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದಾರೆ.
ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ, ಹಾಗೂ ಉತ್ತರಾಖಂಡದಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆದಿದ್ದು, ಐದು ರಾಜ್ಯಗಳಲ್ಲಿಯೂ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ. ಹೀಗಾಗಿ ದೆಹಲಿಯಲ್ಲಿ ಪಕ್ಷದ ಕಚೇರಿಯ ಮುಂದೆ ಇವಿಎಂ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಇವಿಎಂಗಳ ಅಸಮರ್ಪಕ ಕಾರ್ಯ ನಿರ್ವಹಣೆಯೇ ಪಕ್ಷದ ಸೋಲಿಗೆ ಕಾರಣ ಎಂದು ಆರೋಪಿಸಿದರು.
Congress workers protest against EVM, outside party office in Delhi as counting for the #AssemblyElections continues. The party is trailing in all five states as per the latest official trends by the Election Commission. pic.twitter.com/8Ltemk5wrW
— ANI (@ANI) March 10, 2022
ಈ ಕುರಿತು ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಜಗದೀಶ್ ಶರ್ಮಾ, ದೇಶಾದ್ಯಂತ ಜನರು ಸಂಕಷ್ಟದಲ್ಲಿದ್ದಾರೆ, ನಮ್ಮ ಸೈನಿಕರು ಹುತಾತ್ಮರಾಗುತ್ತಿದ್ದಾರೆ, ಆರ್ಥಿಕತೆ ಕುಸಿಯುತ್ತಿದೆ, ಬೆಲೆ ಏರಿಕೆಯಿಂದ ಸಾಮಾನ್ಯ ಜನ ಕಂಗೆಟ್ಟಿದ್ದಾರೆ. ಆದರೆ, ಬಿಜೆಪಿ 300 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವುದಾಗಿ ಹೇಳಿಕೊಳ್ಳುತ್ತಿದೆ. ಹಾಗಾಗಿ, ಅದರ ಹಿಂದಿನ ಕಾರಣವನ್ನು ನಾವು ಮರುಚಿಂತನೆ ಮಾಡಬೇಕಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
Infighting, indiscipline, tickets for notes,workers disenchantment,inflated ego & arrogance of leaders have mauled Congress in Punjab
— Jasbir Singh Gill MP official account (@JasbirGillKSMP) March 10, 2022
ಮತ್ತೊಂದೆಡೆ ಪಂಜಾಬ್ನ ಕಾಂಗ್ರೆಸ್ ಸಂಸದ ಜಸ್ಬೀರ್ ಸಿಂಗ್ ಗಿಲ್ ತಮ್ಮ ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ಚೌಧರಿ ಮತ್ತು ರಾಜ್ಯದ ಸ್ಕ್ರೀನಿಂಗ್ ಕಮಿಟಿ ಮುಖ್ಯಸ್ಥ ಅಜಯ್ ಮಾಕನ್ ಅವರೇ ಪಕ್ಷದ ಸೋಲಿಗೆ ಕಾರಣ ಎಂದು ದೂಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪಕ್ಷದ ಅಂತಃಕಲಹ, ಅಶಿಸ್ತು, ಟಿಕೆಟ್ ಹಂಚಿಕೆಯಲ್ಲಾದ ತಪ್ಪು ನಿರ್ಧಾರ, ಕಾರ್ಮಿಕರ ನಿರಾಶೆ ಮತ್ತು ನಾಯಕರ ದುರಹಂಕಾರವೇ ಪಂಜಾಬ್ನಲ್ಲಿ ಕಾಂಗ್ರೆಸ್ ಸೋಲುವಂತೆ ಮಾಡಿದೆ” ಎಂದು ಹೇಳಿದ್ದಾರೆ.








