ಏಕತೆಗಾಗಿ ಬಾಬ್ರಿ ಪ್ರಕರಣದ ಆರೋಪಿಗಳನ್ನು ದೋಷಮುಕ್ತಗೊಳಿಸಿ – ಇಕ್ಬಾಲ್ ಅನ್ಸಾರಿ
ಅಯೋಧ್ಯೆ, ಸೆಪ್ಟೆಂಬರ್18: ಹಿಂದೂ-ಮುಸ್ಲಿಂ ಐಕ್ಯತೆಯ ಹಿತದೃಷ್ಟಿಯಿಂದ ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸುವಂತೆ ಸುಪ್ರೀಂ ಕೋರ್ಟ್ನಲ್ಲಿ ಅಯೋಧ್ಯೆ ಭೂ ವಿವಾದದ ಮೊಕದ್ದಮೆಯಲ್ಲಿ ದಾವೆ ಹೂಡಿರುವವರಲ್ಲಿ ಒಬ್ಬರಾಗಿದ್ದ ಇಕ್ಬಾಲ್ ಅನ್ಸಾರಿ ಗುರುವಾರ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಸೆಪ್ಟೆಂಬರ್ 30 ರಂದು ಲಖನೌ ವಿಶೇಷ ಸಿಬಿಐ ನ್ಯಾಯಾಲಯ ಬಾಬ್ರಿ ಧ್ವಂಸ ಪ್ರಕರಣದಲ್ಲಿ ತೀರ್ಪು ನೀಡಲಿದೆ. ಇದರಲ್ಲಿ ಹಿರಿಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್ ಮತ್ತು ಉಮಾ ಭಾರತಿ ಸೇರಿದಂತೆ 32 ಮಂದಿ ಆರೋಪಿಗಳಾಗಿದ್ದಾರೆ.
ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದವನ್ನು ಬಗೆಹರಿಸಿದೆ. ಈಗ, ರಾಮ ದೇವಾಲಯ ಮತ್ತು ಮಸೀದಿ ಎರಡನ್ನೂ ಅಯೋಧ್ಯೆಯಲ್ಲಿ (ಪ್ರತ್ಯೇಕ ಸ್ಥಳಗಳಲ್ಲಿ) ನಿರ್ಮಿಸಲಾಗುತ್ತಿದೆ. (ಬಾಬ್ರಿ ಉರುಳಿಸುವಿಕೆ) ಪ್ರಕರಣದಲ್ಲಿ ಹಲವಾರು ಆರೋಪಿಗಳು ಸಾವನ್ನಪ್ಪಿದ್ದಾರೆ. ವಿವಾದವನ್ನು ಕೊನೆಗೊಳಿಸಲು ಮತ್ತು ಹಿಂದೂ-ಮುಸ್ಲಿಂ ಐಕ್ಯತೆಗೆ ದಾರಿ ಮಾಡಿಕೊಡಲು ಸಿಬಿಐ ನ್ಯಾಯಾಲಯವು ಎಲ್ಲಾ 32 ಆರೋಪಿಗಳನ್ನು ಖುಲಾಸೆಗೊಳಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಅನ್ಸಾರಿ ಹೇಳಿದ್ದಾರೆ.
ಕಳೆದ ವರ್ಷ ನವೆಂಬರ್ 9 ರಂದು ಸುಪ್ರೀಂ ಕೋರ್ಟ್ ಅಲ್ಲಿಯವರೆಗೆ ವಿವಾದಿತ ಸ್ಥಳ ಎಂದು ಕರೆಯಲ್ಪಡುವ ರಾಮ ಮಂದಿರ ನಿರ್ಮಿಸಲು ಅನುವು ಮಾಡಿಕೊಟ್ಟಿತ್ತು. ಅಯೋಧ್ಯೆಯಲ್ಲಿ ಬೇರೆಡೆ ಮಸೀದಿ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡುವಂತೆ ನ್ಯಾಯಾಲಯ ಸರ್ಕಾರಕ್ಕೆ ಆದೇಶಿಸಿದೆ.
ನಿಜವಾದ ಸ್ಟೈಲ್ ಕಿಂಗ್ ವಿಷ್ಣುವರ್ಧನ್; ಜನುಮದಿನದ ನೆಪದಲ್ಲಿ ಒಂದು ನೆನಪು