ದೆಹಲಿ ರೈತಹೋರಾಟ : ಟೂಲ್ ಕಿಟ್ ಹಂಚಿಕೆ – ಬೆಂಗಳೂರಿನಲ್ಲಿ ಪರಿಸರ ಕಾರ್ಯರ್ತೆಯ ಬಂಧನ
ನವದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಟೂಲ್ಕಿಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ 21 ವರ್ಷದ ಬೆಂಗಳೂರಿನ ಪರಿಸರ ಕಾರ್ಯಕರ್ತೆ ದಿಶಾ ರವಿಯನ್ನ ದೆಹಲಿಯ ಸೈಬರ್ ಪೊಲೀಸರು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಿದ್ದಾರೆ.
ಪರಿಸರಪರ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಟ್ವೀಟ್ನಲ್ಲಿ ರೈತರ ಹೋರಾಟಕ್ಕೆ ಬೆಂಬಲ ನೀಡುವುದು ಹೇಗೆ ಎಂಬುದನ್ನು ವಿವರಿಸುವ ‘ಟೂಲ್ಕಿಟ್’ ಅನ್ನು ಹಂಚಿಕೊಂಡಿದ್ದಳು. ಇದರ ಸೃಷ್ಟಿಕರ್ತರಿಗೆ ಸಂಬಂಧಿಸಿದ ಇಮೇಲ್ ಐಡಿ, ಯುಆರ್ಎಲ್ ಗಳು ಮತ್ತು ಕೆಲವು ಸಾಮಾಜಿಕ ಮಾಧ್ಯಮಗಳ ಖಾತೆಗಳ ಬಗ್ಗೆ ಮಾಹಿತಿ ನೀಡುವಂತೆ ದೆಹಲಿ ಪೊಲೀಸರು ಗೂಗಲ್ ಮತ್ತು ಸಾಮಾಜಿಕ ಮಾಧ್ಯಮ ಸಂಸ್ಥೆಗಳನ್ನು ಈ ಹಿಂದೆ ಕೇಳಿದ್ದರು.
ಮ್ಯಾನ್ಮಾರ್: ಪ್ರತಿಭಟನಕಾರರಿಗೆ ಆಶ್ರಯ ನೀಡದಂತೆ ಮಿಲಿಟರಿ ಆಡಳಿತ ಎಚ್ಚರಿಕೆ
ಅಲ್ಲದೆ, ಭಾರತ ಸರ್ಕಾರದ ವಿರುದ್ಧ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ಯುದ್ಧ ಸಾರಲಾಗಿದೆ ಎಂದು ಆರೋಪಿಸಿ ದೆಹಲಿ ಸೈಬರ್ ಪೊಲೀಸರು ಖಾಲಿಸ್ತಾನ ಪರ ಹೋರಾಟಗಾರರು ಮತ್ತು ಟೂಲ್ಕಿಟ್ ಸೃಷ್ಟಿಕರ್ತರ ವಿರುದ್ಧ FIR ದಾಖಲಿಸಿದ್ದರು. ದೇಶದಲ್ಲಿ ಸಾಮಾಜಿಕ ಸೌಹಾರ್ದತೆಯನ್ನು ಹಾಳುಮಾಡುವ ಕಾರ್ಯಯೋಜನೆಯನ್ನು ಈ ‘ಟೂಲ್ಕಿಟ್’ ಒಳಗೊಂಡಿದೆ. ಜನವರಿ 26 ಮತ್ತು ಅದಕ್ಕೂ ಮುನ್ನ ಡಿಜಿಟಲ್ ಸ್ಟ್ರೈಕ್ ನಡೆಸುವ ಯೋಜನೆಯನ್ನು ಈ ಟೂಲ್ಕಿಟ್ ವಿವರಿಸಿದೆ. ಹೀಗಾಗಿ ಇದನ್ನು ಬರೆದ ವ್ಯಕ್ತಿಯ ವಿರುದ್ಧ, ಕ್ರಿಮಿನಲ್ ಸಂಚು ರೂಪಿಸಿದ ಮತ್ತು ದೇಶದ್ರೋಹ ಎಸಗಿದ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮ್ಯಾನ್ಮಾರ್ ನಲ್ಲಿ ಸೇನಾ ಸರ್ಕಾರದ ವಿರುದ್ಧ ಭುಗಿಲೆದ್ದ ಜನಾಕ್ರೋಶ..!
ಭಾವೀ ಪತಿ ಜೊತೆ ಸೇರಿ ಬಾಯ್ ಫ್ರೆಂಡ್ ಒಂದು ಗತಿ ಕಾಣಿಸಿದ ಖತರ್ನಾಕ್ ಲೇಡಿ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








