ದೆಹಲಿ ವಿಧಾನಸಭಾ ಚುನಾವಣೆಗಾಗಿ ₹40 ಲಕ್ಷಗಳನ್ನು ಸಂಗ್ರಹಿಸಲು ಕ್ರೌಡ್ ಫಂಡಿಂಗ್ ಅಭಿಯಾನವನ್ನು ಇಂದು ಸಿಎಂ ಆತಿಶಿ ಆರಂಭಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಂದ ಪಡೆಯುವ ಸಣ್ಣ ಪುಟ್ಟ ದೇಣಿಗೆಗಳು ರಾಜಕೀಯಕ್ಕೆ ಪಕ್ಷದ ಪ್ರಾಮಾಣಿಕ ವಿಧಾನವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಕಾರ್ಪೋರೇಟ್ ದೇಣಿಗೆಗಳನ್ನು ಅವಲಂಬಿಸಿರುವ ಇತರ ಪಕ್ಷಗಳಿಗಿಂತ ನಾವು ಭಿನ್ನ. ಸಾಮಾನ್ಯ ನಾಗರಿಕರ ಬೆಂಬಲವೇ ನಮ್ಮ ಪಕ್ಷದ ಪ್ರಚಾರದ ಮೂಲ ಆಧಾರವಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ
ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಟೋಲ್ ಶುಲ್ಕ ಬಾಕಿ ಇರುವ ವಾಹನಗಳು ವಾಹನ ಮಾಲೀಕತ್ವಕ್ಕೆ...








