ಹೊಸದಿಲ್ಲಿ, ಜೂನ್ 8: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾರ್ಭಟ ದಿನದಿಂದ ದಿನಕ್ಕೆ ಜೋರಾಗಿ ಬಾಧಿಸುತ್ತಿದ್ದು, ಇಲ್ಲಿಯವರೆಗೆ ಒಟ್ಟು 27,654 ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ.
ಈ ಮಧ್ಯೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅನಾರೋಗ್ಯಕ್ಕೆ ಒಳಗಾಗಿದ್ದು, ತಮ್ಮನ್ನು ತಾವೇ
ಐಸೋಲೇಶನ್ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಎಲ್ಲೆಡೆಯೂ ಕೊರೊನಾದ ಸೋಂಕು ವ್ಯಾಪಕವಾಗಿ ಹರಡಿರುವ ಹಿನ್ನಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಮಂಗಳವಾರ ಕರೋನಾ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನಿನ್ನೆಯಿಂದ ಶೀತ , ಕೆಮ್ಮು , ಜ್ವರ ಕಾಣಿಸಿಕೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಐಸೋಲೇಶನ್ ಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.
cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!
800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...








