ದೆಹಲಿ: ಇಂದು ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ಮೇರೆದಿದ್ದಾನೆ, ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ವೇಗವಾಗಿ ಬಂದ ಟ್ರಕ್ ಹರಿದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಗಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಮುಂಜಾನೆ 1:50 ರ ಸುಮಾರಿಗೆ ಟ್ರಕ್ ಚಾಲಕ ಡಿಟಿಸಿ ಡಿಪೋ ರೆಡ್ ಲೈಟ್ ಅನ್ನು ದಾಟುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆ ಬಳಿಕ ಚಾಲಕ ಲಾರಿ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.
ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಗೆ ಕರೆತಂದ ಬಳಿಕ ಮೃತಪಟ್ಟಿದ್ದಾರೆ. ಪ್ರಾಥಮಿಕ ಚಿಕಿತ್ಸೆ ವೇಳೆ ನಾಲ್ಕನೇ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಎಎನ್ಐಗೆ ತಿಳಿಸಿದ್ದಾರೆ.
ಮೃತ ನಾಲ್ವರನ್ನು 52 ವರ್ಷದ ಕರೀಂ, 25 ವರ್ಷದ ಚೋಟ್ಟೆ ಖಾನ್ಸ್, 38 ವರ್ಷದ ಶಾ ಆಲಂ ಮತ್ತು 45 ವರ್ಷದ ರಾಹುಲ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರಲ್ಲಿ 16 ವರ್ಷದ ಮನೀಶ್ ಮತ್ತು 30 ವರ್ಷದ ಪ್ರದೀಪ್ ಎಂದು ತಿಳಿದು ಬಂದಿದೆ.
ಈ ಘಟನೆಯನ್ನು ಬೇದಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಚಾಲಕನ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂದು ಸೀಲಂಪುರ ಠಾಣೆಯ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.