ಜಾರ್ಖಂಡ್ ರೋಪ್ ವೇ ಕಾರ್ಯಾಚರಣೆ ಪೂರ್ಣ – 3 ಸಾವು
ಜಾರ್ಖಂಡ್ನಲ್ಲಿ, ದಿಯೋಗರ್ ಜಿಲ್ಲೆಯ ತ್ರಿಕೂಟ ಪರ್ವತದಲ್ಲಿ ರೋಪ್ ವೇ ಕೇಬಲ್ ಕಾರ್ ಅಪಘಾತದಲ್ಲಿ ಸಿಲುಕಿಕೊಂಡಿದ್ದ ಪ್ರವಾಸಿಗರ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ.
ಬ್ರಹ್ಮಾಸ್ತ್ರ ಕಾರ್ಪ್ಸ್, ಇಂಡಿಯನ್ ಏರ್ಫೋರ್ಸ್, ಐಟಿಬಿಪಿ, ಎನ್ಡಿಆರ್ಎಫ್, ಸ್ಥಳೀಯ ಆಡಳಿತ ಮತ್ತು ಸ್ಥಳೀಯ ಜನರ 45 ಗಂಟೆಗಳ ಕಾಲ ಯಶಸ್ವಿ ರಕ್ಷಣಾ ಕಾರ್ಯಾಚರಣೆಗಾಗಿ ಕಾಕೆರೆಲ್ ವಿಭಾಗದ ಪಡೆಗಳಿಗೆ ದಿಯೋಗರ್ನ ಡೆಪ್ಯೂಟಿ ಕಮಿಷನರ್ ಮಂಜುನಾಥ್ ಭಜಂತ್ರಿ ಧನ್ಯವಾದ ಅರ್ಪಿಸಿದ್ದಾರೆ.
IAF Mi 17 ಮತ್ತು Mi-17 V5 ಹೆಲಿಕಾಪ್ಟರ್ಗಳನ್ನು ರಕ್ಷಣಾ ಕಾರ್ಯಾಚರಣೆಯಲ್ಲಿ ನಿಯೋಜಿಸಲಾಗಿದೆ. ಎಲ್ಲಾ ಪ್ರಯಾಣಿಕರನ್ನು ಟ್ರೋಲಿಗಳಿಂದ ಚಾಪರ್ ಮೂಲಕ ಹೊರತರಲಾಗಿದೆ. ಅಪಘಾತದಲ್ಲಿ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ದಿಯೋಘರ್ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ ಮೂವರು ಸಾವನ್ನಪ್ಪಿದ್ದಾರೆ.
ರೋಪ್ವೇ ಅಪಘಾತಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಹೈಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆಗೆ ಒಳಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಡಾ.ರವಿ ರಂಜನ್, ನ್ಯಾಯಮೂರ್ತಿ ಸುಜಿತ್ ನಾರಾಯಣ ಪ್ರಸಾದ್ ಅವರಿದ್ದ ವಿಭಾಗೀಯ ಪೀಠ ಈ ಕುರಿತು ತನಿಖೆಗೆ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಏಪ್ರಿಲ್ 26 ರಂದು ನಿಗದಿಪಡಿಸಿದೆ.