ಬೆಂಗಳೂರು: ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ 6 ತಿಂಗಳ ಬಳಿಕ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಸಿಸಿಎಚ್-82 ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಕೊಡಿಗೆಹಳ್ಳಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153ಂ, 294ಂ, 295ರಡಿ ಪ್ರಕರಣ ದಾಖಲಾಗಿದೆ.
ಕಳೆದ ವರ್ಷದ ಜುಲೈನಲ್ಲಿ ಮುರುಗೇಶ್ ನಿರಾಣಿ ಹಿಮದೂ ದೇವತೆಗಳನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದರು. ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಹೀಗಾಗಿ ನಿರಾಣಿ ವಿರುದ್ಧ ರಾಜ್ಕುಮಾರ್ ಕಟುವಾ ಎಂಬವರು ಕಳೆದ ಜುಲೈನಲ್ಲೇ ನ್ಯಾಯಾಲಯದ ಮೊರೆ ಹೋಗಿದ್ದರು.
ನಿರಾಣಿ ವಿರುದ್ದ ಎಫ್ಐಆರ್ ದಾಖಲಿಸುವಂತೆ ಸಿಟಿ ಸಿವಿಲ್ ಕೋರ್ಟ್, ಎಫ್ಐಆರ್ ದಾಖಲಿಸುವಂತೆ ಡಿ.26 ರಂದೇ ಕೊಡಿಗೇಹಳ್ಳಿ ಪೆÇಲೀಸರಿಗೆ ಸೂಚನೆ ನೀಡಿತ್ತು.
“ಮಗಳನ್ನೇ ಮದುವೆಯಾದ ಬ್ರಹ್ಮ ನಮಗೆ ದೇವರು. 16 ಸಾವಿರ ಹೆಂಡಂದಿರನ್ನು ಮದುವೆಯಾದ ದನಾ ಕಾಯುವ ಕೃಷ್ಣ ನಮ್ಮ ದೇವರು. ಮುಗ್ಧ ಬಾಲಕಿಯರು ಸರೋವರದಲ್ಲಿ ಬೆತ್ತಲೆ ಸ್ನಾನ ಮಾಡುವಾಗ ಸೀರೆ ಕದ್ದ ತುಡುಗ ನಮ್ಮ ದೇವರು. ತಲೆ ಮೇಲೆ ಒಬ್ಬಳು ತೊಡೆಯ ಮೇಲೆ ಒಬ್ಬಳನ್ನು ಇಟ್ಟುಕೊಂಡಾತ ನಮಗೆ ದೇವರು”
“ತುಂಬು ಗರ್ಭಿಣಿ ಯನ್ನು ಕಾಡಿಗಟ್ಟಿದ ರಾಮ ನಮ್ಮ ದೇವರು. ಹಾವು, ಹಂದಿ, ಕುದುರೆ, ಕತ್ತೆ, ನಾಯಿ, ಆಕಳು, ರತ್ನಪಕ್ಷಿ ಇನ್ನೂ ಹಲವು ದೇವರಾದರೆ ಕಾಗೆ, ಗೂಬೆ, ಬೆಕ್ಕು ಅಪಶಕುನ. ದೇವರಿಗೆ ದೇವರೆನಿಸಿಕೊಂಡಾತ ಇಂದ್ರನು ಮಾಡಲಾರದ ಅನಾಚಾರಗಳು ಎಷ್ಟು? ಆದರೂ ಆತ ನಮ್ಮ ದೇವರು. ಗಂಡನ ಸಂಪರ್ಕ ಪಡೆಯದೇ ಸೂರ್ಯನಿಂದ, ಯಮನಿಂದ, ಇಂದ್ರನಿಂದ, ವಾಯುವಿನಿಂದ ಪುತ್ರರನ್ನು ಪಡೆದ ಕುಂತಿ ದೇವತೆ”
ಸನಾತನಿಗಳು ತಮ್ಮ ತೀಟೆಗೆ ನೂರೆಂಟು ಕಥೆಗಳನ್ನು ಕಟ್ಟಿ ಸ್ತ್ರೀಯರನ್ನು ಅವಹೇಳನ ಮಾಡಿದ್ದಾರೆ ಎಂದು ಮುರುಗೇಶ್ ಕಿಡಿಕಾಡಿದ್ದರು ಎಂದು ಆರೋಪಿಸಿ ದೂರು ನೀಡಲಾಗಿತ್ತು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel