ರಾಯಚೂರು: ದೇವದುರ್ಗದ ಶಾಸಕಿ (Devadurga MLA) ಕರೆಮ್ಮ ನಾಯಕ್ ಗೆ (Karemma Nayak) ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರ ವಿರುದ್ಧ ದೇವದುರ್ಗ (Devadurga) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ತಾಲೂಕಿನ ಆಲದಮರ ತಾಂಡದಲ್ಲಿ ವಿದ್ಯುತ್ ಅವಘಡದಿಂದ ಲೈನ್ಮ್ಯಾನ್ ವಿರೂಪಾಕ್ಷಿ ಸಾವನ್ನಪ್ಪಿದ್ದರು. ಆದರೆ, ಘಟನಾ ಸ್ಥಳಕ್ಕೆ ಶಾಸಕಿ ಭೇಟಿ ತಡವಾಗಿ ಭೇಟಿ ನೀಡಿದ್ದಾರ ಎಂದು ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈ ಹಿಡಿದು ಎಳೆದಾಡಿ, ಚಪ್ಪಲಿ ಎಸೆದಿರುವ ಆರೋಪ ಕೇಳಿ ಬಂದಿದೆ.
ಘಟನೆ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರು ಹಾಗೂ ಶಾಸಕಿ ಕರೆಮ್ಮ ನಾಯಕ್ ಅಭಿಮಾನಿಗಳು ದೇವದುರ್ಗ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ 8 ಜನರ ವಿರುದ್ಧ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.