ಬೆಂಗಳೂರು: ಕೇಂದ್ರದ ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ಹೋರಾಟ ನಡೆಸಿದ ರೈತರ ವಿರುದ್ಧ ಪೊಲೀಸ್ ಬಲಪ್ರಯೋಗ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ.
ರೈತರನ್ನು ಗೌರವದಿಂದ ನೋಡಿಕೊಳ್ಳಿ. ರೈತರನ್ನು ಕರೆಸಿ ಒಟ್ಟಿಗೆ ಕುಳಿತು ಚರ್ಚೆ ಮಾಡಿ. ರೈತರ ಮೇಲೆ ಪೊಲೀಸ್ ಬಲ ಪ್ರಯೋಗ ಸಮಸ್ಯೆಯನ್ನು ಪರಿಹರಿಸದು ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.
ಕೃಷಿ ಕಾನೂನು ವಿರೋಧಿಸಿ ಪ್ರತಿಭಟಿಸಲು ದೆಹಲಿಗೆ ತೆರಳುತ್ತಿದ್ದ ಪಂಜಾಬ್ ರೈತರ ಮೇಲೆ ಹರಿಯಾಣ ಮತ್ತು ದೆಹಲಿ ಗಡಿಯಲ್ಲಿ ಪೊಲೀಸರು ಜಲಫಿರಂಗಿ, ಅಶ್ರುವಾಯು ಸಿಡಿಸಿದ್ದರು.
ಈ ಘಟನೆ ಬಗ್ಗೆ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿರುವ ದೇವೇಗೌಡರು, ರೈತರ ಸಮಸ್ಯೆ ಆಲಿಸುವಂತೆ ಸಲಹೆ ನೀಡಿದ್ದಾರೆ. ದೆಹಲಿ ರೈತ ಚಳವಳಿಯ ಚಿತ್ರಗಳನ್ನು ನೋಡಿ ಬೇಸರವಾಗಿದೆ. ರೈತರನ್ನು ಗೌರವದಿಂದ ಕಾಣುವಂತೆ ಕೇಂದ್ರ ಸರ್ಕಾರವನ್ನು ಕೋರುತ್ತೇನೆ. ದಯವಿಟ್ಟು ಅವರೊಂದಿಗೆ ಮಾತನಾಡಿ. ಅವರ ಮಾತುಗಳನ್ನು ಕೇಳಿ. ಪೊಲೀಸ್ ಪಡೆ ಸಮಸ್ಯೆಯನ್ನು ಪರಿಹರಿಸದು ಎಂದು ಸಲಹೆ ನೀಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel