ಕೊರೊನಾ ಹಾವಳಿಗೆ ತತ್ತರಿಸಿಹೋಗಿರುವ ದಕ್ಷಿಣ ಕನ್ನಡದಲ್ಲಿ ಈ ಬಾರಿ ಪ್ರಸಿದ್ಧ ನಾಗಪಂಚಮಿ ಆಚರಣೆಗೆ ತಡೆ ಹೇರಲಾಗಿದೆ. ಅದರಂತೆ ಎಲ್ಲಾ ನಾಗಾರಾಧನೆ ಸ್ಥಳಗಳಲ್ಲಿ ಸಾರ್ವಜನಿಕ ನಾಗಪಂಚಮಿ ಆಚರಣೆಗೆ ನಿರ್ಬಂಧ ಹೇರಲಾಗಿದೆ. ಇದರ ಬೆನ್ನಲ್ಲೇ ಮಂಗಳೂರಿನ ಇತಿಹಾಸ ಪ್ರಸಿದ್ಧ ಕುಡುಪು ದೇಗುಲಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ. ಇದೇ ಜುಲೈ 25 ರಂದು ನಾಗಪಂಚಮಿಯಿದ್ದು, ಪ್ರತಿ ವರ್ಷ ಕುಡುಪು ದೇವಾಲಯದಲ್ಲಿ ಸಾವಿರಾರು ಭಕ್ತರು ಜಮಾವಣೆಗೊಂಡು ನಾಗನ ಆರಾಧನೆ ಮಾಡುತ್ತಿದ್ದರು. ಆದ್ರೆ ಈ ಬಾರಿ ಕೇವಲ ರಾಜ್ಯ ಅಷ್ಟೇ ಅಲ್ಲದೆ ಇಡೀ ವಿಶ್ವದ ಮೇಲೆ ಕೊರೊನಾ ಕರಿ ನೆರಳು ಆವರಿಸಿದೆ. ಸೋಂಕು ನಿರ್ಮೂಲನೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯತೆಯಾಗಿದೆ. ಹೀಗಾಗಿಯೇ ಕುಡುಪು ಸನ್ನಿಧಾನಕ್ಕೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಗಪಂಚಮಿ ದಿನದಂದು ದರ್ಶನ, ತೀರ್ಥ ಪ್ರಸಾದ, ಆರಾಧನೆ ಎಲ್ಲಕ್ಕೂ ಬ್ರೇಕ್ ಹಾಕಲಾಗಿದೆ. ಆದರೆ ಅರ್ಚಕರು ಹಾಗೂ ದೇಗುಲದ ಸಿಬ್ಬಂದಿ ಸರಳವಾಗಿ ಸಂಕೇತವಾಗಿ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ.
ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ
ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...








