11 ಮಹಿಳೆಯರ ಸಾವಿಗೆ ಕಾರಣ ಅಶೋಕ್ ಖೇಣಿ : ಬಂಧಿಸಿ ಎಂದು ಸರ್ಕಾರಕ್ಕೆ ಆಗ್ರಹ
ಧಾರವಾಡ: ಇತ್ತೀಚೆಗೆ ಧಾರವಾಡದ ಬಳಿ ನಡೆದ ಭೀಕರ ಅಪಘಾತದಲ್ಲಿ ಪ್ರವಾಸಕ್ಕೆ ಹೊರಟಿದ್ದ 11 ಮಹಿಳೆಯರು ದಾರುಣವಾಗಿ ಮೃತಪಟ್ಟ ಪ್ರಕರಣಕ್ಕೆ ನೇರ ಕಾರಣ ನೈಸ್ ಸಂಸ್ಥೆಯ ಮಾಲೀಕ ಅಶೋಕ ಖೇಣಿಯೇ ಎಂಬುದು ಹಲವರ ಅಭಿಪ್ರಾಯವಾಗಿದ್ದು, ಅವರನ್ನ ಬಂಧಿಸುವಂತೆ ಸರ್ಕಾರಕ್ಕೆ ಒತ್ತಡಗಳು ಕೇಳಿಬರುತ್ತಿವೆ.
ಏನಾಗಿದೆ ಸಮಾಜಕ್ಕೆ.. ಅತ್ಯಾಚಾರಿಗಳಿಗೆ ನಮ್ಮ ಕಾನೂನಿನ ಭಯ ಯಾಕಿಲ್ಲ.. ಹುಡುಗಿಯರಿಗೆ ಬದುಕುವ ಹಕ್ಕೇ ಇಲ್ವಾ..!
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಇಟಗಟ್ಟಿ ಕ್ರಾಸ್ ಬಳಿ ನಡೆದಿರುವ ಈ ದುರಂತಕ್ಕೆ ಖೇಣಿ ಅವರನ್ನೇ ನೇರ ಹೊಣೆ ಮಾಡಬೇಕು ಎಂದು ಐಸಿಸಿ ಸದಸ್ಯ ದೀಪಕ ಚಿಂಚೋರೆ ಆಗ್ರಹಿಸಿದ್ದಾರೆ. ಇದೇ ಸ್ಥಳದ ಆಸುಪಾಸಿನಲ್ಲಿ ಹಲವಾರು ಅಪಘಾತಗಳು ನಡೆದಿದ್ದು ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಈ ರಸ್ತೆ ನಿರ್ಮಾಣ, ನಿರ್ವಹಣೆ ಹಾಗೂ ಶುಲ್ಕ ಸಂಗ್ರಹಿಸುತ್ತಿರುವ ನೈಸ್ ಸಂಸ್ಥೆ ಮಾತ್ರ ಕಣ್ಮುಚ್ಚಿ ಕುಳಿತುಕೊಂಡಿದೆ. ಇಷ್ಟು ಬಲಿಯಾದರೂ ಇದುವರೆಗೆ ಕ್ರಮ ತೆಗೆದುಕೊಂಡಿಲ್ಲ. ಆದ್ದರಿಂದ ಎಲ್ಲಾ ಸಾವಿಗೂ ಖೇಣಿಯವರೇ ನೇರ ಹೊಣೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಪ್ರೀತಿಸಿ ಮದುವೆಯಾಗಲ್ಲ ಎಂದವನ ಕೈಯಿಂದ ಯುವತಿಗೆ ತಾಳಿ ಕಟ್ಟಿಸಿದ ಪೊಲೀಸರು..!
ಅಶೋಕ ಖೇಣಿ ಅವರಿಗೆ ಈ ರಸ್ತೆ ನಿರ್ಮಾಣ, ನಿರ್ವಹಣೆ ಹಾಗೂ ಶುಲ್ಕ ಸಂಗ್ರಹ ಆಧಾರದ ಮೇಲೆ ನೀಡಲಾಗಿದೆ. ಇವರು ಇಲ್ಲಿ ರಸ್ತೆಯನ್ನು ವಿಸ್ತರಣೆ ಮಾಡದಂತೆ ತಡೆಯುತ್ತಲೇ ಬಂದಿದ್ದಾರೆ. ಪ್ರತಿ ತಿಂಗಳು ಕೋಟ್ಯಂತರ ರುಪಾಯಿ ಟೋಲ್ ಸಂಗ್ರಹಿಸುತ್ತಿರುವ ಇವರು ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಾ ವಿಸ್ತರಣೆಗೆ ತಡೆಯೊಡ್ಡುತ್ತಿದ್ದಾರೆ ಎಂದು ಚಿಂಚೋರೆ ಆರೋಪಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel