ಇದು ಸಾವೋ ಅಥವಾ ಕೊಲೆಯೋ : ಚಾಮರಾಜನಗರ ಘಟನೆ ಬಗ್ಗೆ ರಾಗಾ ಟ್ವೀಟ್ rahul gandhi
ಬೆಂಗಳೂರು : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿರೋದು ದೇಶದಾದ್ಯಂತ ಸದ್ದು ಮಾಡುತ್ತಿದೆ.
ಈ ಬಗ್ಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿ ತಮ್ಮ ಟ್ವೀಟ್ ನಲ್ಲಿ ಇದು ಸಾವೋ ಅಥವಾ ಕೊಲೆಯೋ ಎಂದು ಪ್ರಶ್ನಿಸಿದ್ದಾರೆ.
ವ್ಯವಸ್ಥೆ ಎಚ್ಚರಗೊಳ್ಳುವ ಮೊದಲು ಇನ್ನು ಇಂತಹ ಎಷ್ಟು ಸಾವು ನೋವುಗಳು ಸಂಭವಿಸುತ್ತವೋ.
ಸಾವನ್ನಪ್ಪಿರುವರ ಕುಟುಂಬಗಳಿಗೆ ಸಂತಾಪ ಎಂದು ಬರೆದುಕೊಂಡಿದ್ದಾರೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಿನ್ನೆ ರಾತ್ರಿ 24 ಮಂದಿ ಕೊರೊನಾ ಸೋಂಕಿತರ ಮೃತಪಟ್ಟಿದ್ದಾರೆ.
ಇದಕ್ಕೆ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದು, ಆಕ್ರೋಶ ಹೊರಹಾಕುತ್ತಿದ್ದಾರೆ.