ಬೆಂಗಳೂರು: ಕಾಂಗ್ರೆಸ್ ಕಟ್ಟಪ್ಪ, ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯ ಕಾಂಗ್ರೆಸ್ ಸಾರಥಿಯಾಗಿ ದಿನೇಶ್ ಗುಂಡೂರಾವ್ ಅವರನ್ನೇ ಮುಂದುವರೆಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎನ್ನುವ ಮಾತುಗಳು ಕಾಂಗ್ರೆಸ್ ಪಾಳಯದಲ್ಲೇ ಕೇಳಿಬರುತ್ತಿವೆ. ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಟ್ರಬಲ್ ಶೂಟರ್ ಗೆ ಅಧ್ಯಕ್ಷ ಪಟ್ಟ ಕಟ್ಟಲು ಒಲವು ತೋರಿಲ್ಲ ಎಂದು ಹೇಳಲಾಗುತ್ತಿದೆ.
“ಶೂಟರ್ ಗೆ” ಇಡಿ ಅಥವಾ ಸಿಬಿಐ “ಟ್ರಬಲ್”
ರಾಜ್ಯ ಕಾಂಗ್ರೆಸ್ ಸಾರಥಿ ಆಗಲು ಡಿ.ಕೆ ಶಿವಕುಮಾರ್ ಅವರಿಗೆ ಎಲ್ಲಾ ರೀತಿಯ ಅರ್ಹತೆಗಳಿವೆ. ಆದ್ರೆ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಮತ್ತೆ ಇಡಿ ಅಥವಾ ಸಿಬಿಐನಿಂದ ತೊಂದರೆ ಬಂದರೆ ಕಾನೂನಾತ್ಮಕವಾಗಿ ಹೋರಾಡಬೇಕಾಗುತ್ತದೆ. ಇದರಿಂದ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ. ಈ ಉದ್ದೇಶದಿಂದ ಶಿವಕುಮಾರ್ ಬದಲು ದಿನೇಶ್ ಗುಂಡೂರಾವ್ ಅವರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮರು ಆಯ್ಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಸಿದ್ಧತೆ ನಡೆಸಿದೆಯಂತೆ.







