Dinesh Karthik – ದಿನೇಶ್ ಔಟ್.. ಪಂತ್ ಲೈನ್ ಕ್ಲಿಯರ್ !
ಟಿ 20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಗೆಲುವು, ಒಂದರಲ್ಲಿ ಸೋಲು ಅನುಭವಿಸಿದೆ.
ಇದರೊಂದಿಗೆ ಅಂಕಪಟ್ಟಿಯಲ್ಲಿ ಸದ್ಯ ಎರಡನೇ ಸ್ಥಾನದಲ್ಲಿದ್ದು, ತನ್ನ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ.
ಆದ್ರೆ ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಬಗ್ಗೆ ಮೇಜರ್ ಅಪ್ ಡೇಟ್ ಯೊಂದು ಹೊರಬಿದ್ದಿದೆ.
ಅದು ಏನಂದರೇ ಸೌಥ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಬೆನ್ನುನೋವಿನಿಂದ ಮೈದಾನದಿಂದ ಹೊರ ನಡೆದ ದಿನೇಶ್ ಕಾರ್ತಿಕ್, ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎಂದು ತಿಳಿದುಬಂದಿದೆ.
ನವೆಂಬರ್ 2 ರಂದು ಬಾಂಗ್ಲಾದೇಶದ ವಿರುದ್ಧದ ಅಡಿಲೇಡ್ ಅಂಗಳದಲ್ಲಿ ಪಂದ್ಯ ನಡೆಯಲಿದ್ದು, ಆ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಬದಲಿಗೆ ರಿಷಬ್ ಪಂತ್ ಗೆ ಅವಕಾಶ ಸಿಗಲಿದೆ ಎಂದು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ನ ಪ್ರಮುಖ ವ್ಯಕ್ತಿ ತಿಳಿಸಿದ್ದಾರೆ.
ದಿನೇಶ್ ಕಾರ್ತಿಕ್ ಅವರ ಗಾಯ ತೀವ್ರ ಸ್ವರೂಪದಲ್ಲ ಆದರೂ ಅವರು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಆಡುವುದಿಲ್ಲ ಎಂದು ತಿಳಿದುಬಂದಿದೆ.
ದಿನೇಶ್ ಕಾರ್ತಿಕ್ ಬದಲಿಗೆ ರಿಷಬ್ ಕಣಕ್ಕಿಳಿಯುವುದು ಪಕ್ಕಾ ಆಗಿದ್ದು, ಅದು ಕೇವಲ ಬಾಂಗ್ಲಾ ವಿರುದ್ಧದ ಪಂದ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ ಎಂದು ತಂಡದ ಮೂಲಗಳು ತಿಳಿಸಿವೆ.
ಒಟ್ಟಾರೆ ದಿನೇಶ್ ಕಾರ್ತಿಕ್ ಗೆ ರೆಸ್ಟ್ ನೀಡುವುದರಿಂದ ರಿಷಬ್ ಪಂತ್ ಲೈನ್ ಕ್ಲಿಯರ್ ಆಗಿದೆ.
![dinesh karthik-stunning-reply-rishab pant](http://saakshatv.com/wp-content/uploads/2022/07/dinesh-300x205.jpg)
ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ರಿಷಬ್ ಉತ್ತಮ ಪ್ರದರ್ಶನ ನೀಡಿದರೆ ತಂಡದಲ್ಲಿ ಉಳಿದುಕೊಳ್ಳುವ ಸಾಧ್ಯತೆಗಳಿವೆ.
ಯಾಕಂದರೆ ಕಳೆದ ಮೂರು ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಉತ್ತಮ ಪ್ರದರ್ಶನ ನೀಡಿಲ್ಲ. ಪಾಕ್ ವಿರುದ್ಧದ ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ಡಿಕೆಗೆ ಕೊನೆಯ ಓವರ್ ನಲ್ಲಿ ಬ್ಯಾಟಿಂಗ್ ಅವಕಾಶ ಸಿಕ್ಕಿತ್ತು.
ನೆದರ್ ಲೆಂಡ್ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಗೆ ಬ್ಯಾಟಿಂಗ್ ಅವಕಾಶ ಸಿಕ್ಕಿರಲಿಲ್ಲ. ಆದ್ರೆ ದಕ್ಷಿಣ ಆಫ್ರಿಕಾ ವಿರುದ್ದದ ಪಂದ್ಯದಲ್ಲಿ ದಿನೇಶ್ ಗೆ ಬ್ಯಾಟಿಂಗ್ ಅವಕಾಶ ಸಿಕ್ಕರೂ ನಿಧಾನಗತಿ ಬ್ಯಾಟಿಂಗ್ ನಡೆಸಿದರು.
ಹೀಗಾಗಿ ಅವರ ಬದಲಿಗೆ ರಿಷಬ್ ಪಂತ್ ಗೆ ಅವಕಾಶ ನೀಡಬೇಕು ಎಂಬ ವಾದ ನಡೆಯುತ್ತಿದೆ. ಇದೀಗ ದಿನೇಶ್ ಇಂಜೂರಿಯಾಗಿದ್ದು, ರಿಷಬ್ ಗೆ ಚಾನ್ಸ್ ಸಿಗಲಿದೆ. ಈ ಅವಕಾಶವನ್ನು ಪಂತ್ ಹೇಗೆ ಬಳಸಿಕೊಳ್ಳುತ್ತಾರೆ ಅನ್ನೋದನ್ನ ಕಾದುನೋಡಬೇಕು.