IPL 2022 | ಆರ್ ಸಿಬಿಯ ಡಿಕೆ ಸಾಹೇಬನಿಗೆ ವಾರ್ನಿಂಗ್..
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಭಾರಿ ಶಾಕ್ ಎದುರಾಗಿದೆ.
ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಆಯೋಜಕರು ಡಿಕೆಗೆ ಛೀಮಾರಿ ಹಾಕಿದ್ದಾರೆ.
ಎಲಿಮಿನೇಟರ್ ಪಂದ್ಯದ ವೇಳೆ ಡಿ.ಕೆ ಅನುಚಿತವಾಗಿ ನಡೆದುಕೊಂಡಿದ್ದಾರೆ ಎಂದು ಮಾಧ್ಯಮ ಹೇಳಿಕೆ ಬಿಡುಗಡೆಯಾಗಿದೆ.
ಮೇ 25 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಿನೇಶ್ ಕಾರ್ತಿಕ್ ಗೆ ವಾರ್ನಿಂಗ್ ನೀಡಲಾಗಿದೆ.
ಕಾರ್ತಿಕ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.3 (ಹಂತ-1) ಅನ್ನು ಉಲ್ಲಂಘಿಸಿದ್ದಾರೆ.
ಆದರೆ, ದಿನೇಶ್ ಕಾರ್ತಿಕ್ ಮಾಡಿರುವ ತಪ್ಪೇನು ಅಂತಾ ಬಹಿರಂಗವಾಗಿಲ್ಲ.
ನಿಯಮ 1 ಅನ್ನು ಉಲ್ಲಂಘಿಸಿದ್ದಕ್ಕಾಗಿ ಡಿಕೆಗೆ ಎಚ್ಚರಿಕೆ ನೀಡಲಾಗಿದೆ.
ಎಲಿಮಿನೇಟರ್ ಪಂದ್ಯದಲ್ಲಿ 23 ಎಸೆತಗಳನ್ನು ಎದುರಿಸಿದ ಡಿಕೆ 37 ರನ್ ಗಳಿಸಿ ಅಜೇಯರಾಗಿ ಉಳಿದು ಆರ್ಸಿಬಿ ಗೆಲುವಿನಲ್ಲಿ ತಮ್ಮ ಪಾತ್ರವನ್ನು ನಿರ್ವಹಿಸಿದರು.