ಧ್ರುವ ಸರ್ಜಾ ಸಿನಿಮಾದಿಂದ ಹೊರಬಿದ್ದ ನಂದ ಕಿಶೋರ್ …!
ಪೊಗರು ಸಿನಿಮಾದಲ್ಲಿ ಜೊತೆಯಾಗಿದ್ದ ಧ್ರುವ ಸರ್ಜಾ ಹಾಗೂ ನಿರ್ದೇಶಕ ನಂದ ಕಿಶೋರ್ ಕಾಂಬಿನೇಷನಲ್ಲೇ ಮತ್ತೊಂದು ಹೊಸ ಸಿನಿಮಾ ಘೋಷಣೆಯಾಗಿತ್ತು. ‘ದುಬಾರಿ’ ಟೈಟಲ್ ನ ಸಿನಿಮಾದ ಸ್ಕ್ರಿಪ್ಟ್ ಪೂಜೆಯೂ ನೆರವೇರಿತ್ತು.. ಆದ್ರೆ ಧಿಡೀರನೇ ಈ ಸಿನಿಮಾವನ್ನ ಇಬ್ಬರು ಬದಿಗಿಟ್ಟು , ನಂದ ಕಿಶೋರ್ ಬೇರೆ ಸಿನಿಮಾದಲ್ಲಿ ಬ್ಯುಸಿಯಾದ್ರು.. ಆದ್ರೆ ಇದೀಗ ನಂದ ಕಿಶೋರ್, ‘ದುಬಾರಿ’ ಸಿನಿಮಾದಿಂದ ಹೊರಬಿದ್ದಿದ್ದಾರೆ ಎಂಬ ವಿಚಾರ ಬಾರೀ ಸದ್ದು ಮಾಡ್ತಿದೆ.
ಹೌದು ನಂದ ಕಿಶೋರ್ ಅನ್ನು ಸಿನಿಮಾದಿಂದ ಹೊರಗಿಡಲು ಸಿನಿಮಾದ ನಿರ್ಮಾಪಕ ಉದಯ್ ಕೆ ಮೆಹ್ತಾ ನಿರ್ಧಾರ ಮಾಡಿದ್ಧಾರೆ ಎನ್ನಲಾಗುತ್ತಿದೆ. ‘ದುಬಾರಿ’ ಸಿನಿಮಾಕ್ಕೆ ತಮಿಳಿನ ಒಬ್ಬ ಕತೆಗಾರರಿಂದ ಹೊಸದೊಂದು ಕತೆ ಬರೆಸಿದ್ದು, ಅವರಿಂದಲೇ ನಿರ್ದೇಶನ ಮಾಡಿಸಲಾಗುವುದು ಎನ್ನಲಾಗ್ತಿದೆ.. ಆದ್ರೆ ಈ ನಿರ್ಧಾರದಿಂದ ಬಹುತೇಕ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.