ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದ್ವೇಷದ ರಾಜಕೀಯ ಮಾಡುವುದನ್ನು ಬಿಟ್ಟು, ವಿರೋಧ ಪಕ್ಷಗಳೊಂದಿಗೆ ಮಾತನಾಡಿ, ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವ ಪ್ರಯತ್ನ ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಬಜೆಟ್ ಮಂಡನೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸದೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರವು ದ್ವೇಷದ ರಾಜಕೀಯ ಮಾಡುವ ಬದಲು ಆರ್ಥಿಕತೆಯನ್ನು ಸುಧಾರಿಸಲು ಗಮನಹರಿಸಬೇಕು. ಪ್ರಧಾನಮಂತ್ರಿಯವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅಗತ್ಯ ಬಿದ್ದರೆ ವಿರೋಧ ಪಕ್ಷಗಳೊಂದಿಗೆ ಚರ್ಚೆ ನಡೆಸಬೇಕು ಎಂದು ತಿಳಿಸಿದರು.
ಇಂದು ಮಂಡನೆಯಾಗಿರುವ ಬಜೆಟ್ ಜನಪರವಾಗಿದ್ದು, ಜನರ ಅಗತ್ಯಗಳನ್ನು ಮನದಲ್ಲಿಟ್ಟುಕೊಂಡೇ ಮಂಡಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ತಿಳಿಸಿದರು.
ಕೇಜ್ರಿವಾಲ್ ಜೈಲಿನಿಂದ ಆಡಳಿ ನಡೆಸುವಂತಿಲ್ಲ; ಗವರ್ನರ್ ಸಕ್ಸೇನಾ
ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಲ್ಲಿಂದಲೇ ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ. ಈಗ ಅರವಿಂದ್...